
ಬಾಗಲಕೋಟೆ: ಇಲ್ಲಿನ ಪುರಸಭೆಯ ಸಭಾಭವನದಲ್ಲಿ 2025-26ನೇ ಸಾಲಿನ ವಾರ್ಷಿಕ ಬಜೆಟ್ನ್ನು ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಮಂಡಿಸಿದರು.

j3tvkannada
ವಿವಿಧ ಮೂಲಗಳಿಂದ ಒಟ್ಟು ₹29.48 ಕೋಟಿ ಆದಾಯ ಮತ್ತು ಒಟ್ಟು 29.45 ಕೋಟಿ ಖರ್ಚು ನಿರೀಕ್ಷಿಸಲಾಗಿದ್ದು, 2.96 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು. ಬಜೆಟ್ ಮಂಡನೆಯಾಗುವ ಮುನ್ನವೇ ಬಿಜೆಪಿ ಸದಸ್ಯ ನಾಗರಾಜ ಕಾಚಟ್ಟಿ, ‘ಆರು ತಿಂಗಳಿಂದ ಸದಸ್ಯರ ಸಭೆ ಕರೆದಿಲ್ಲ. ಹಿಂದಿನ ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿವೆ ಎಂಬುದಕ್ಕೆ ಬಜೆಟ್ ಪೂರ್ವಭಾವಿಯಾಗಿ ಸಭೆ ಕರೆದು ಚರ್ಚಿಸಲಿಲ್ಲ ಯಾಕೆ?’ ಎಂದು ಪುರಸಭೆ ಅಧ್ಯಕ್ಷ ಮತ್ತು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಹಿಂದಿನ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಲು ಈ ಬಜೆಟ್ನಲ್ಲಿ ಸೇರಿಸಲಾಗಿದೆ’ ಎಂದು ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟಿಮನಿ ಸ್ಪಷ್ಟಪಡಿಸಿದರು. ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸಲು ಐತಿಹಾಸಿಕ ಪ್ರವಾಸಿ ತಾಣದ ಅಭಿವೃದ್ಧಿಗೆ ಮುಂಗಡ ಪತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಇಲ್ಲ’ ಎಂದು ನಾಗರಾಜ ಕಾಚಟ್ಟಿ ಆರೋಪಿಸಿದರು. ‘ಕೇಂದ್ರ ಸರ್ಕಾರದ 77 ಲಕ್ಷದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬಹುದು’ ಎಂದು ಅಧ್ಯಕ್ಷ ಕಟ್ಟಿಮನಿ ಸಭೆಯಲ್ಲಿ ತಿಳಿಸಿದರು.