
ಹಾಸನ: ಆಲೂರು ಪಟ್ಟಣದ ಮುಖ್ಯ ರಸ್ತೆಗೆ 2 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ಮಾಡಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

j3tvkannada
ಪಟ್ಟಣದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಆಲೂರು ಪಟ್ಟಣದ ಮುಖ್ಯ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿರುವುದರಿಂದ ಈಗಾಗಲೆ ಹಲವು ರಸ್ತೆ ಅಪಘಾತಗಳು ಸಂಭವಿಸಿ, ಕೆಲವು ಮಂದಿ ಮೃತಪಟ್ಟರೆ ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡು ಅಂಗವೈಕಲ್ಯದಿಂದ ಬಳಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅಪಘಾತ ತಪ್ಪಿಸುವ ಸಲುವಾಗಿ ಸರ್ಕಾರ ಮತ್ತು ಸಂಬಂಧಪಟ್ಟ ಮಂತ್ರಿಗಳ ಗಮನ ಸೆಳೆಯುವ ಮೂಲಕ ಅನುದಾನ ತಂದು ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಮೊದಲ ಹಂತದಲ್ಲಿ ವೀರಶೈವ ಕಲ್ಯಾಣ ಮಂಟಪದಿಂದ ವಿಶ್ವೇಶ್ವರಯ್ಯ ಶಾಲೆಯವರೆಗೆ 2 ಕೋಟಿ ರೂ ವೆಚ್ಚದಲ್ಲಿ 1.2 ಕಿ, ಮೀ.ಮರು ಡಾಂಬರೀಕರಣ ಮಾಡಲಾಗುವುದು. ಎರಡನೇ ಹಂತದಲ್ಲಿ ವಿಶ್ವೇಶ್ವರಯ್ಯ ಶಾಲೆಯಿಂದ 400 ಮೀಟರ್ ದ್ವಿಮುಖ ರಸ್ತೆ ಮಾಡಿ ಮದ್ಯದಲ್ಲಿ ಹೂವಿನ ಗಿಡಗಳನ್ನು ನೆಡಲಾಗುವುದು. ಮೂರನೇ ಹಂತದಲ್ಲಿ ವೀರಶೈವ ಕಲ್ಯಾಣ ಮಂಟಪದಿಂದ ಬೈರಾಪುರದವರೆಗೂ ಮತ್ತು ಮುಂದುವರೆದ ಕಾಮಗಾರಿ 400 ಮೀಟರ್ ದ್ವಿಮುಖ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 75 ರವರೆಗೆ ರಸ್ತೆ ಕಾಮಗಾರಿಯನ್ನು ಮಾಡಲಾಗುವುದು ಎಂದರು.