
ಮೈಸೂರು: ರಾಸಾಯನಿಕ ಸೇರ್ಪಡೆ ವದಂತಿಯಿಂದಾಗಿ ಕೆಲವೆಡೆ ಕಲ್ಲಂಗಡಿ ಹಣ್ಣಿನ ಬೇಡಿಕೆ ಕುಸಿದಿದ್ದು, ರೈತರು ಹಣ್ಣುಗಳನ್ನು ಮಾರಾಟ ಮಾಡಲಾಗದೆ ನಷ್ಟ ಅನುಭವಿಸುವಂತಾಗಿದೆ.

j3tvkannada
ಬಿರು ಬಿಸಿಲಿನಲ್ಲಿ ದೇಹವನ್ನು ತಂಪಾಗಿರಿಸಲು ನೆರವಾಗುವ ಕಲ್ಲಂಗಡಿ ಹಣ್ಣಿನ ಬೆಲೆ ಕಡಿಮೆಯಾದರೂ, ಖರೀದಿಸಲು ಗ್ರಾಹಕರು ಮುಂದೆ ಬರುತ್ತಿಲ್ಲ. ಇದರಿಂದ ಮಾರಾಟಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ಇಳುವರಿಯೂ ಹೆಚ್ಚಾಗಿದೆ. ನೆರೆ ರಾಜ್ಯದಿಂದಲೂ ಬೇಡಿಕೆಗೂ ಮೀರಿ ಕಲ್ಲಂಗಡಿ ಆಮದು ಮಾಡಿಕೊಳ್ಳಲಾಗಿದೆ. ವದಂತಿಯಿಂದ ರೈತರು ಬೆಳೆಯನ್ನು ಮಾರಾಟ ಮಾಡಲಾಗದೆ, ಹೊಲದಲ್ಲಿಯೂ ಬಿಡಲಾಗದ ಸ್ಥಿತಿಯಲ್ಲಿದ್ದಾರೆ.