
ಬೆಂಗಳೂರು: ಇತ್ತೀಚೆಗೆ ಕೆಲವು ವಾಹನ ಸವಾರರು ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ ಬೇಕಾ ಬಿಟ್ಟಿಯಾಗಿ ವಾಹನ ಚಲಾಯಿಸುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಇದರಿಂದಾಗಿ ಅನೇಕ ಅಪಘಾತಗಳು ನಡೆದು ಜೀವಹಾನಿಯಾಗುತ್ತಿದೆ. ಅತಿಯಾದ ವೇಗ ಪ್ರಾಣವನ್ನೇ ಬಲಿತೆಗೆದುಕೊಳ್ಳುತ್ತದೆ ಎಂದು ಗೊತ್ತಿದ್ದರೂ ಕೆಲವರು ಅದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಮಾತ್ರ ನಿಜಕ್ಕೂ ದುರ್ದೈವವೇ ಸರಿ. ಅವಸರವೇ ಅಪಘಾತಕ್ಕೆ ಕಾರಣವೆಂದು ತಿಳಿದಿದ್ದರೂ ಜನ ಮಾತ್ರ ಎಚ್ಚೆತ್ತುಕೊಳ್ಳುವುದಿಲ್ಲ. ಇದಕ್ಕೆ ಉದಾಹರಣೆಯೇ ಈ ಘಟನೆ.
ಬೊಮ್ಮನಹಳ್ಳಿಗೆ ಹೊಗುವ, ಹೊಸೂರ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ,ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕ್ ಪಲ್ಟಿಯಾಗಿದೆ. ಅದೃಸ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಚಾಲಕನನ್ನು ಸ್ತಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ್ದರಿಂದ ಸುಮಾರು 3 ರಿಂದ 4 ತಾಸು ವಾಹನ ದಟ್ಟನೆ, ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು.