
ವಿಜಯನಗರ: ಹೊಸಪೇಟೆ ನಗರದ ಜಂಬುನಾಥ ರಸ್ತೆಯಲ್ಲಿ ರಾತ್ರಿ ಯುವಕನ ಬರ್ಬರ ಕೊಲೆ ಮಾಡಿದ ಆರೋಪಿ ಹುಚ್ಚಕಾಳಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ ಘಟನೆ ನಗರದ ಹೊರವಲಯದ ಮಹಾದೇವ ಇಂಡಸ್ಟ್ರೀಸ್ ಬಳಿ ನಡೆದಿದೆ.

j3tvkannada
ಕೊಲೆ ಆರೋಪಿ ಹುಚ್ಚಕಾಳಿ ಕೊಲೆಗೆ ಬಳಸಿದ ಚಾಕುಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನದ ವೇಳೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ. ಆಗ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಪಿಐ ಹಾಗೂ ತನಿಖಾಧಿಕಾರಿ ಹುಲುಗಪ್ಪರಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಅರೋಪಿ ನಡೆಸಿದ ದಾಳಿಯಿಂದ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಿಬ್ಬಂದಿ ಹೆಡ್ ಕಾನ್ ಸ್ಟೆಬಲ್ ಲಿಂಗರಾಜ್ ಮತ್ತು ಕಾನ್ ಸ್ಟೆಬಲ್ ಕೊಟ್ರೇಶ್ ಗಾಯಗೊಂಡಿದ್ದಾರೆ. ರಾತ್ರಿಯ ಸಮಯದಲ್ಲಿ ಹಳೆ ದ್ವೇಷದ ಹಿನ್ನೆಲೆ ಹೊನ್ನೂರ ಸ್ವಾಮಿ ಎಂಬುವವರನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿತ್ತು.