
ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ವ್ಯವಸ್ಥೆ ಪ್ರಬಲಗೊಳಿಸಲು ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಸದಾ ವಿನೂತನ ಪ್ರಯತ್ನಗಳನ್ನು ನಡೆಸುತ್ತಿದ್ದು ಈ ಬಾರಿ ಎಸ್ಎಸ್ಎಲ್ಸಿಯಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆಯುವ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯಲ್ಲಿ ಎರಡು ವರ್ಷಗಳ ವಸತಿಯುತ ಪಿಯುಸಿ ಕೋರ್ಸ್ಗೆ ಉಚಿತ ಪ್ರವೇಶ ನೀಡಲಾಗುವುದು. ಎಂದು ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಹೇಳಿದರು.

j3tvkannada
ಕೊಪ್ಪಳ: ಪಿಯುಸಿ ಫಲಿತಾಂಶದ ಕುರಿತು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕನ್ನಡ ಮಾಧ್ಯಮ ರಾಜ್ಯಪಠ್ಯಕ್ರಮ ಆಂಗ್ಲ ಮಾಧ್ಯಮದ ಸಿಬಿಎಸ್ಇ ಐಸಿಎಸ್ಇ ಪಠ್ಯದ ವಿಭಾಗದಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಮಗಿಷ್ಟವಾದ ಕೋರ್ಸ್ ಆಯ್ಕೆಮಾಡಿಕೊಂಡು ಎರಡು ವರ್ಷ ವಸತಿ ಜತೆಗೆ ಉಚಿತ ಶಿಕ್ಷಣ ಪಡೆಯಬಹುದು. ಒಂದು ತಾಲ್ಲೂಕಿಗೆ ಮೂವರಂತೆ 100 ಮಂದಿಗೆ ಉಚಿತ ಪ್ರವೇಶದ ಅವಕಾಶ ನೀಡಲಾಗುವುದು. ಪ್ರಥಮ ಸ್ಥಾನ ಪಡೆದ ಬಗ್ಗೆ ವಿದ್ಯಾರ್ಥಿಗಳು ಬಿಇಒ ಕಚೇರಿಯಿಂದ ಪತ್ರ ತಂದು ಕಾಲೇಜಿಗೆ ನೀಡಿದರೆ ಪ್ರವೇಶಾತಿ ನೀಡಲಾಗುತ್ತದೆ ಎಂದು ವಿವರಿಸಿದರು.ಅತ್ಯುತ್ತಮ ಫಲಿತಾಂಶ ಈ ವರ್ಷವು ಸಹ ವಿದ್ಯಾನಿಕೇತನ ಪಿಯು ಕಾಲೇಜಿನ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಫಲಿತಾಂಶ ಅತ್ಯುತ್ತಮವಾಗಿ ಬಂದಿದ್ದು ಜಿಲ್ಲೆಯ ಬಹುತೇಕ ಟಾಪರ್ಗಳು ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿಗಳೇ ಆಗಿರುವುದು ಖುಷಿಯ ಸಂಗತಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಹೇಳಿದರು.