
ಮೈಸೂರು: ನಂಜನಗೂಡು ತಾಲ್ಲೂಕಿನ ತಾಂಡವಪುರದಲ್ಲಿರುವ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಿಇಟಿ ಉಚಿತ ತರಬೇತಿ ನಡೆಯಿತು.

j3tvkannada
ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಕಾಲೇಜು ನಿರಂತರ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು 2 ವಾರ ಆಯೋಜಿಸಿದ್ದ ಸಿಇಟಿ ಉಚಿತ ತರಬೇತಿಯಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ಟಿ.ಕೃಷ್ಣಗೌಡ ರವರು ತಿಳಿಸಿದರು.
ಇಂಜಿನಿಯರ್ ಪದವಿ ಪಡೆಯುವ ಆಕಾಂಕ್ಷಿಗಳಿಗೆ ಸತತ 8 ವರ್ಷಗಳಿಂದ ತರಬೇತಿ ನೀಡಲಾಗುತ್ತಿದ್ದು ಮಧ್ಯಾಹ್ನದ ಊಟದ ವ್ಯವಸ್ಥೆ ಹಾಗೂ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.