
ಕೊಡಗು: ಇಲ್ಲಿನ ಕಾಲೇಜ್ ರಸ್ತೆಯ ನಿವಾಸಿ ಸಾಕಮ್ಮ ಅವರ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಕಸಿದುಕೊಂಡು ಹೋಗಿದ್ದ ಅಪರಾಧಿ ರಾಜಸ್ತಾನದ ವಿಕಾಸ್ ಜೋರ್ಡಿಯಾ (35) ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

j3tvkannada
ಅಪರಾಧಿಯು 2023ರ ನವೆಂಬರ್ 6ರಂದು ಸಾಕಮ್ಮ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇದ್ದ ವೇಳೆಯಲ್ಲಿ ನುಗ್ಗಿ ಹಲ್ಲೆ ಮಾಡಿ, ತಲೆಗೆ ಗಾಯ ಮಾಡಿ, ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಕೈಬೆರಳಿನಲ್ಲಿದ್ದ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿದ್ದ. ದೂರು ದಾಖಲಿಸಿಕೊಂಡ ಸಿಪಿಐ ಪಿ.ಅನೂಪ್ ಮಾದಪ್ಪ, ಕನ್ಸ್ಟೆಬಲ್ಗಳಾದ ಎ.ವಿ.ಕಿರಣ್, ಡಿ.ಎಚ್.ಸುಮಿತಾ ಮರುದಿನವೇ ಈತನನ್ನು ಬಂಧಿಸಿ, ನಂತರ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, 15 ಸಾವಿರ ದಂಡ ವಿಧಿಸಿದರು.