
ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತುಂಬರಗುಡ್ಡಿ ರಾಜ್ಯ ಅರಣ್ಯದ 125 ಎಕರೆಯಲ್ಲಿ ಕಬ್ಬಿಣದ ಹಾಗೂ ಮ್ಯಾಂಗನೀಸ್ ಅದಿರು ಅನ್ವೇಷಣೆ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಕೆಐಒಸಿಎಲ್ ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ.

j3tvkannada
ಬಳ್ಳಾರಿ :ಸಂಡೂರಿನ ದೇವದಾರಿಯಲ್ಲಿ ಈ ಕಂಪನಿಗೆ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಲು ಕೇಂದ್ರ ಉಕ್ಕು ಸಚಿವಾಲಯ ಕಳೆದ ವರ್ಷ ಅನುಮತಿ ನೀಡಿತ್ತು. ಆದರೆ ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಈ ಕಂಪನಿಯು ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗೆ ಕೊಳವೆ ಮಾರ್ಗ ಅಳವಡಿಸುವುದೂ ಸೇರಿ 465.73 ಹೆಕ್ಟೇರ್ ಪ್ರದೇಶವನ್ನು ಅನುಮತಿ ಇಲ್ಲದೇ ಅರಣೇತರ ಉದ್ದೇಶಕ್ಕೆ ಬಳಕೆ ಮಾಡಿದೆ. ಎನ್ಪಿವಿ ಶುಲ್ಕ 628 ಕೋಟಿ ಹಾಗೂ ಬಡ್ಡಿ ಸೇರಿ ಒಟ್ಟಾರೆ 3,000 ಕೋಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಡಬೇಕಾಗಿದೆ. ಈ ಎಲ್ಲ ನಿಬಂಧನೆಗಳನ್ನು ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು. ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದರು. ಕೆಐಒಸಿಎಲ್ ಈ ಮೊತ್ತ ಪಾವತಿಸದೇ ಇದ್ದರೂ ಗಣಿ ಅನ್ವೇಷಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.