
ದಕ್ಷಿಣ ಕನ್ನಡ: ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡು, ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟದಲ್ಲಿ ನಡೆದಿದೆ.

j3tvkannada
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ತನ್ನ ಮನೆ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆಯೇ ಅವರು ಮೃತಪಟ್ಟರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿ ಕಾರಣಕ್ಕೆ ಪ್ರಜ್ಞೆ ತಪ್ಪಿಬಿದ್ದಿದ್ದರು. ಲೋ ಬಿಪಿಯಿಂದಲೇ ತೆಂಗಿನ ಮರದಿಂದ ಬಿದ್ದಿರುವ ಸಾಧ್ಯತೆಯೂ ಇದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.