
ಬೆಂಗಳೂರು: ಬೆಳಗಾವಿ-ಬೆಂಗಳೂರು ಮತ್ತು ಬೆಂಗಳೂರು-ಎರ್ನಾಕುಲಂ ನಡುವೆ ಬೇಸಿಗೆ ವಿಶೇಷ ರೈಲುಗಳ ಟ್ರಿಪ್ ನಡೆಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

j3tvkannada
ಬೆಂಗಳೂರು: ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಕ್ರಮ ತೆಗೆದು ಕೊಳ್ಳಲಾಗಿದೆ. ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 12ರಂದು ಬೆಳಿಗ್ಗೆ 4ಕ್ಕೆ ಬೆಳಗಾವಿಯಿಂದ ಹೊರಡುವ ರೈಲು ಮಧ್ಯಾಹ್ನ 3.30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಲೋಂಡಾ, ಅಳ್ಳಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಎಸ್ಎಂವಿಟಿ ಯಿಂದ ಎರ್ನಾ ಕುಲಂಗೆ ವಿಶೇಷ ಟ್ರಿಪ್ ಇರಲಿದೆ. ಏ.12ರಂದು ಸಂಜೆ 4.35ಕ್ಕೆ ಹೊರಡುವ ರೈಲು ಮರುದಿನ ಮುಂಜಾನೆ 3ಕ್ಕೆ ಎರ್ನಾಕುಲಂ ತಲುಪಲಿದೆ. ಏ.14ರಂದು ರಾತ್ರಿ 10ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.55ಕ್ಕೆ ಬೆಂಗಳೂರು ತಲುಪಲಿದೆ. ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಅಲುವಾಗಳಲ್ಲಿ ನಿಲುಗಡೆ ಹೊಂದಿದೆ.