
ಬೆಂಗಳೂರು :ಸುದ್ದಗುಂಟೆಪಾಳ್ಯದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಸಂತೋಷ್ ಕುಮಾರ್ಗೆ ಆತನ ಪ್ರೇಯಸಿಯೇ ಕೇರಳಕ್ಕೆ ಪರಾರಿಯಾಗಲು ನೆರವು ನೀಡಿದ್ದಳು. ಹೊಸಕೋಟೆಯ ನಿವಾಸಿಯಾಗಿರುವ ಈಕೆ ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದು, ಆರೋಪಿಗೆ ಹಣ ನೀಡಿ ಸಹಾಯ ಮಾಡಿದ್ದಳು. ಈ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ. ಆರೋಪಿಯನ್ನು ಆರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

j3tvkannada
ಪರಾರಿಯಾಗಲು ಪ್ರೇಯಸಿಯೇ ನೆರವಾಗಿದ್ದ ಸಂಗತಿ ತನಿಖೆಯಲ್ಲಿ ಬಯಲಾಗಿದ್ದು, ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ. ವಿವಾಹಿತೆಯಾದ ಆ ಮಹಿಳೆಗೆ ಒಂದು ಮಗುವಿದೆ. ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯಿಂದ ದೂರವಾಗಿದ್ದ ಆ ಮಹಿಳೆ ಮತ್ತು ಆರೋಪಿ ಸಂತೋಷ್ ಕುಮಾರ್ ಪರಸ್ಪರ ಪ್ರೀತಿಸುತ್ತಿದ್ದರು. ಆರೋಪಿಯು ಏಪ್ರಿಲ್ 3ರಂದು ರಾತ್ರಿ ಮದ್ಯದ ನಶೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಪ್ರೇಯಸಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದ.