
ರಾಮನಗರ : ಸಂವಿಧಾನವು ಎಲ್ಲಾ ಜಾತಿ ಒಂದೇ ಎಂದು ಹೇಳುವಾಗ ಜಾತಿ ಗಣತಿ ಯಾಕೆ ಬೇಕು? ಎಂದು ಬೆಂಗಳೂರು ಗ್ರಾಮಾಂತರ ಸಂಸದ, ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್ ಮಂಜುನಾಥ್ ಪ್ರಶ್ನೆ ಮಾಡಿದ್ದಾರೆ. ರಾಮನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ಅವರು, ಡಾ.ಬಿ. ಆರ್ ಅಂಬೇಡ್ಕರ್ ಅವರು ದೇಶದಲ್ಲಿ ಜಾತಿ ಭಿನ್ನಾಭಿಪ್ರಾಯ ಇರಬಾರದು ಎಂದು ಹೇಳಿದ್ದರು. ಸಂವಿಧಾನ ಕೂಡ ಹೇಳುತ್ತೆ ಜಾತಿ ಬಗ್ಗೆ ಮಾತನಾಡಬಾರದೆಂದು.
ಹಾಗಿದ್ದ ಮೇಲೆ ಜಾತಿ ಗಣತಿ ಯಾಕೆ ಎಂಬುದು ಗೊತ್ತಿಲ್ಲ. ಈ ವಿಚಾರವನ್ನು ಜನಾಭಿಪ್ರಾಯಕ್ಕೆ ಬಿಡಬೇಕು ಎಂದು ಹೇಳಿದರು. ಭಾರತ ಜ್ಯಾತ್ಯಾತೀತ ರಾಷ್ಟ್ರವಾಗಿದೆ. ಜಾತಿ ಗಣತಿಗೆ ಯಾವುದೇ ಮಹತ್ವವಿಲ್ಲ. ಸಾಮಾಜಿಕ, ಶೈಕ್ಷಣಿಕವಾಗಿ ಬಂದ ಗಣತಿಯನ್ನ ಜಾತಿಗೆ ಹೋಲಿಕೆ ಮಾಡಬಾರದು. ಇದರಿಂದ ಜಾತಿ ಜಾತಿಗಳ ನಡುವೆ ವೈಮನಸ್ಸು, ಕಂದಕಗಳು ಜಾಸ್ತಿ ಆಗುತ್ತವೆ ಎಂದು ತಿಳಿಸಿದರು. ಎಲ್ಲಾ ಜಾತಿಗಳಲ್ಲೂ ಬಡವರು ಇದ್ದಾರೆ.
ಜಾತಿ ಗಣತಿ ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಚರ್ಚೆ ಆಗಬೇಕು. ಸಾಮಾಜಿಕ ಕಳಕಳಿ, ತಜ್ಞರ ಜೊತೆ ಚರ್ಚೆ ಆಗಬೇಕು. ವಿಧಾನಸಭೆಯ ಕಮಿಟಿ ಮಾಡಬೇಕು. ಆತುರದ ನಿರ್ಧಾರದ ಸರಿ ಅಲ್ಲ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.

j3tvkannada
ಪ್ರಪಂಚದ ಅನೇಕ ರಾಷ್ಟ್ರಗಳು, ನಾಯಕರು ಹೆಚ್ಚು ಗೌರವ ನೀಡುವುದು ನಮ್ಮ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನಕ್ಕೆ. ನಮ್ಮ ದೇಶದ ಏಕೈಕ ರಾಷ್ಟ್ರೀಯ ಗ್ರಂಥ ಸಂವಿಧಾನ. ಭಾರತಕ್ಕೆ ಸಂವಿಧಾನ ಎನ್ನುವ ಆತ್ಮ ನೀಡಿದ ಪರಮಾತ್ಮ ಡಾ.ಬಿ.ಆರ್.ಅಂಬೇಡ್ಕರ್ ಅವರು” ಎಂದು ಡಿ.ಸಿ.ಎಂ .ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. ನಗರದ ದೊಮ್ಮಲೂರಿನಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಡಿ.ಸಿ.ಎಂ. ಡಿ ಕೆ ಶಿವಕುಮಾರ್ ಅವರು ಸೋಮವಾರ ಅನಾವರಣಗೊಳಿಸಿ ಮಾತನಾಡಿದರು.
ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಸಂವಿಧಾನವನ್ನು ಕೊಟ್ಟ ಧೀಮಂತ ವ್ಯಕ್ತಿ ಅಂಬೇಡ್ಕರ್. ಜನಸಂಖ್ಯೆಯ ಆಧಾರದ ಮೇಲೆ ನಮ್ಮ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಮೀಸಲಿಡಲಾಗಿದೆ. ಗುತ್ತಿಗೆಯಲ್ಲಿ ಅವಕಾಶ ನೀಡಲಾಗಿದೆ. ಪಾವಗಡದ ಸೌರ ಪಾರ್ಕ್ ನಿರ್ಮಾಣದ ವೇಳೆಯಲ್ಲಿಯೂ ಮೀಸಲಾತಿ ನೀಡಲಾಯಿತು. ಈ ಮೂಲಕ ಅಂಬೇಡ್ಕರ್ ಅವರ ಆಶಯಗಳಿಗೆ ಗೌರವ ನೀಡಿದ್ದೇವೆ. ಶೋಷಿತರನ್ನು ಉದ್ಯಮಿಗಳನ್ನಾಗಿ ಮಾಡುವುದು ನಮ್ಮ ಉದ್ದೇಶ ಎಂದರು.

j3tvkannada
ಸಂವಿಧಾನ ರಕ್ಷಣೆಯ ಬಗ್ಗೆ ಏಕೆ ನಾವೆಲ್ಲರು ಇಷ್ಟು ಮಾತನಾಡುತ್ತೇನೆ ಎಂದರೆ, ಬದುಕಿಗೆ, ಆಸ್ತಿಗೆ ಸೇರಿದಂತೆ ನಮ್ಮ ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಂವಿಧಾನ ರಕ್ಷಣೆ ನೀಡುತ್ತದೆ. ನ್ಯಾಯ ಒದಗಿಸುವುದೇ ನಮ್ಮ ಸಂವಿಧಾನದ ಮೂಲಮಂತ್ರ. ಸಂವಿಧಾನವೇ ನಮ್ಮ ತಂದೆ, ತಾಯಿ, ಸಂವಿಧಾನವೇ ಬಂಧು ಬಳಗ, ಅಂಬೇಡ್ಕರ್ ಅವರ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮನು” ಎಂದು ಹೇಳಿದರು.
ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಸಾಕಷ್ಟು ಹೋರಾಟ ನಡೆಸಿದವರು ಬಾಬಾ ಸಾಹೇಬರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡುವಾಗ ಸಂವಿಧಾನದ ಪ್ರತಿ ಹಿಡಿದುಕೊಂಡು ಇತಿಹಾಸ ಸೃಷ್ಟಿ ಮಾಡಿದರು. ನಾನು ಕೆ.ಪಿ.ಸಿ.ಸಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡಾಗ ಹಿರಿಯ ನಾಯಕರಾದ ರೆಹಮಾನ್ ಖಾನ್ ಅವರಿಂದ ಸಂವಿಧಾನ ಪೀಠಿಕೆ ಓದಿಸಿ ಅಧಿಕಾರ ಸ್ವೀಕಾರ ಮಾಡಿದೆ” ಎಂದರು. ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬರಿಗೆ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿತು. ಚುನಾವಣೆ ಸೋತಾಗ ಅಂಬೇಡ್ಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಾನೂನು ಮಂತ್ರಿಯನ್ನಾಗಿ ಮಾಡಿದಾಗ ಅವರು ಕೇವಲ ಪರಿಶಿಷ್ಟರ ಪರವಾಗಿ ಕೆಲಸ ಮಾಡಲಿಲ್ಲ. ಸಮಾಜದ ಎಲ್ಲರ ಪರವಾಗಿ ಕೆಲಸ ಮಾಡಿದರು. ಕುವೆಂಪು ಅವರು ಹೇಳಿದಂತೆ ಸರ್ವರಿಗೂ ಸಮಬಾಳು, ಸಮಪಾಲು ಎನ್ನುವ ತತ್ವಕ್ಕೆ ಸತ್ವ ನೀಡಿದವರು ಬಾಬಾ ಸಾಹೇಬರು ಎಂದು ಹೇಳಿದರು.