
ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ಹೋರಾಟ, ಸಮಾಜದಲ್ಲಿನ ಭಿನ್ನಾಭಿಪ್ರಾಯ ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ಏ.20ರಂದು ಮಧ್ಯಾಹ್ನ 3ಕ್ಕೆ ಸಮಾಜದ ರಾಜ್ಯಮಟ್ಟದ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

j3tvkannada
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ರಾಷ್ಟ್ರ, ರಾಜ್ಯ ಘಟಕಗಳ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಸಚಿವರು, ಶಾಸಕರು ಸೇರಿದಂತೆ ಸಮಾಜದ ಎಲ್ಲರೂ ಭಾಗವಹಿಸಬೇಕು ಎಂದರು.
ಜಗತ್ತಿನಾದ್ಯಂತ ನಮ್ಮ ಸಂಘಟನೆ ಸದೃಢವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವುದರ ಜೊತೆಗೆ ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದರು .ಸಮಾಜದ ಯಾವುದೇ ವ್ಯಕ್ತಿಯ ಪರವಾಗಿ ಹೋರಾಟ ಮಾಡಿಲ್ಲ. ಸಮಾಜದ ಪರವಾಗಿ ಹೋರಾಟ ಮಾಡಿದ್ದೇನೆ. ಗೊಂದಲ, ಭಿನ್ನಾಭಿಪ್ರಾಯ ಸಹಜ. ಅಜ್ಞಾನ, ಆಸೆ, ಆಮಿಷಕ್ಕೆ ಒಳಗಾಗಿ ಟೀಕೆ ಮಾಡುತ್ತಿದ್ದಾರೆ. ಅಂತವರು ತಮ್ಮ ಆತ್ಮವಾವಲೋಕನ ಮಾಡಿಕೊಳ್ಳಲಿ ಎಂದರು.