
ಚಿಕ್ಕಮಗಳೂರು :ಕಡೂರು ತಾಲ್ಲೂಕಿನ ಅಂಚೇ ಚೋಮನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ಮೂಲದ ಕಾರ್ಮಿಕ ಆರ್ಮುಗ (42) ಮೃತಪಟ್ಟವರು.

j3tvkannada
ಗ್ರಾಮದಲ್ಲಿ ಗೋಪುರ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಕೆಳಗೆ ಬಿದ್ದರು. ಕೂಡಲೇ ಅವರನ್ನು ಕಡೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.