ಸಿರುಗುಪ್ಪ: ತಾಲೂಕಿನ ಹಳೇಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ನಿಮ್ಹಾನ್ಸ, ಬೆಂಗಳೂರು, ಅಡಿಯಲ್ಲಿ ಬರುವ ಯುವ ಸ್ಪಂದನ ಕೇಂದ್ರ ಬಳ್ಳಾರಿ ವತಿಯಿಂದ, ಜೀವನ ಕೌಶಲ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಕಲಿಕಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಎಷ್ಟು ಅವಶ್ಯಕತೆ ಇರುತ್ತವೆ ಎಂದು ಎನ್.ಎಸ್.ಎಸ್. ಅಧಿಕಾರಿ ಕುಬೇರ್ ಸುಗುಟ್ ತಿಳಿಸಿದರು.

ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ವೃತ್ತಿ, ವ್ಯಕ್ತಿತ್ವ ಮತ್ತು ಬೆಳವಣಿಗೆ, ಜೀವನ ಶೈಲಿ, ಸುರಕ್ಷತೆ, ಲಿಂಗ ಮತ್ತು ಲೈಂಗಿಕತೆ, ಹಾಗೂ ಸಂಬಂಧಗಳು ಹೀಗೆ ಈ ಆರು ವಿಷಯಗಳ ಬಗ್ಗೆ ತಿಳಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಎಷ್ಟು ಅವಶ್ಯಕತೆ ಇವೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದರು.
ಯುವ ಸ್ಪಂದನ ಕೇಂದ್ರದ ತಾಲೂಕು ಯುವ ಪರಿವರ್ತಕ ಖಾಸಿಮ್ ಹಳೇಕೋಟೆ ಇವರು ಯುವ ಸ್ಪಂದನದ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಹಲವಾರು ಮಾಹಿತಿಗಳನ್ನು ಈ ಸಂದರ್ಭದಲ್ಲಿ ತಿಳಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳು, ಶಿಕ್ಷಕರು, ಸಿಬ್ಭಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.