
ಕೊಡಗು:ಸೋಮವಾರಪೇಟೆ ಸಮೀಪದ ಕಾರೆಕೊಪ್ಪದ ಉಚ್ಚ ಬಸವೇಶ್ವರ ದೇವರ ಉತ್ಸವ ಇತ್ತೀಚೆಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.

j3tvkannada
ಅರ್ಚಕರಾದ ಮಾದೇವ ಅವರ ನೇತೃತ್ವದಲ್ಲಿ ಗ್ರಾಮದ ಬಾವಿ ಕಟ್ಟೆಯಲ್ಲಿ ಮಹಿಳೆಯರು ಗ್ರಾಮಸ್ಥರು ಸೇರಿ ಗಂಗಾ ಪೂಜೆಯನ್ನು ನೆರವೇರಿಸಿದರು. ಪೂರ್ಣಕುಂಭ ಹೊತ್ತ ಮಹಿಳೆಯರು ಗ್ರಾಮಸ್ಥರು ಪಂಚವಾದ್ಯ ಮೆರವಣಿಗೆಯೊಂದಿಗೆ ದೇವಾಲಯ ಪ್ರವೇಶಿಸಿದರು. ಮಹಾ ಮಂಗಳಾರತಿ ಪ್ರಸಾದ ವಿನಿಯೋಗದ ನಂತರ ಭಕ್ತಾದಿಗಳು ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡರು.
ಪೂಜಾ ಕಾರ್ಯಕ್ರಮದ ಪ್ರಯುಕ್ತ ದೇವಾಲಯ ಮತ್ತು ಗ್ರಾಮದ ಪ್ರಮುಖ ರಸ್ತೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಕುಶಾಲಪ್ಪ, ಕಾರ್ಯದರ್ಶಿ ಯೋಗೇಶ್, ಪ್ರಮುಖರಾದ ಕೊಟ್ಟಿಗೆ ಮನೆ ರಾಜಣ್ಣ, ಲವ ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.