
ಮಂಗಳೂರು : ಅಡ್ಯಾರ್ ಕಣ್ಣೂರಿನಲ್ಲಿ ಇದೇ 18ರಂದು ನಡೆಯುವ ಪ್ರತಿಭಟನಾ ಸಮಾವೇಶದ ಸಲುವಾಗಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗಾಗಿ ಅಂದು ಮಧ್ಯಾಹ್ನ 12ರಿಂದ ರಾತ್ರಿ 9ರ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಡೀಲ್ – ಅರ್ಕುಳ ನಡುವೆ ಬದಲಿ ಮಾರ್ಗ ಬಳಸಬೇಕು. ಪಂಪುವೆಲ್ / ನಂತೂರು – ಪಡೀಲ್ – ಬಿ.ಸಿ.ರೋಡ್ವರೆಗೆ ಹೆದ್ದಾರಿ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪಂಪ್ವೆಲ್ / ನಂತೂರು – ಪಡೀಲ್ – ಕಣ್ಣೂರು – ಅಡ್ಯಾರ್ – ಸಹ್ಯಾದ್ರಿ – ಅರ್ಕುಳ – ಫರಂಗಿಪೇಟೆ – ತುಂಬೆ -ಬಿ.ಸಿ.ರೋಡ್ ಹೆದ್ದಾರಿಯಲ್ಲಿ ನಗರಕ್ಕೆ ಬರುವ ಹಾಗೂ ಹೋಗುವ ಭಾರಿ ವಾಹನಗಳು, ಸರಕು ವಾಹನಗಳು ಹಾಗೂ ಬಸ್ಗಳು, ಪಡೀಲ್ – ಕಣ್ಣೂರು – ಅಡ್ಯಾರ್ ಕಟ್ಟೆ ರಸ್ತೆಯಲ್ಲಿ ನಗರಕ್ಕೆ ಬರುವ ಹಾಗೂ ಹೋಗುವ ಎಲ್ಲಾ ತರಹದ ವಾಹನಗಳು ಮತ್ತು ದ್ವಿ-ಚಕ್ರ ವಾಹನಗಳು ಬದಲಿ ಮಾರ್ಗ ಬಳಸಬೇಕು ಎಂದು ಸಲಹೆ ನೀಡಿದ್ದಾರೆ.

j3tvkannada
ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು/ಕಾಸರಗೋಡು ಕಡೆಗೆ ಹೋಗುವ ವಾಹನಗಳು ಮೆಲ್ಕಾರ್ ಜಂಕ್ಷನ್ – ಬೊಳಿಯಾರ್ – ಮುಡಿಪು – ದೇರಳಕಟ್ಟೆ -ತೊಕ್ಕೊಟ್ಟು ಮೂಲಕ ಸಂಚರಿಸಬಹುದು. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ – ನೀರುಮಾರ್ಗ – ಬೈತುರ್ಲಿ – ಕುಲಶೇಖರ – ನಂತೂರು ಮೂಲಕ ಸಂಚರಿಸಬಹುದು. ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುವ ಕಾರು/ರಿಕ್ಷಾ/ಬೈಕ್ಗಳು ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು – ನೀರುಮಾರ್ಗ – ಬೈತುರ್ಲಿ – ನಂತೂರು ಮೂಲಕ ಸಂಚರಿಸಬಹುದು. ಅಡ್ಯಾರ್ ಕಟ್ಟೆ-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಮೂಲಕ ಸಂಚರಿಸಬಹುದು. ವಳಚ್ಚಿಲ್ ಜಂಕ್ಷನ್-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಬರುವ ಕಾರು/ರಿಕ್ಷಾ/ಬೈಕ್ಗಳು ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು – ನೀರುಮಾರ್ಗ – ಬೈತುರ್ಲಿ – ನಂತೂರು ಮೂಲಕ ಸಂಚರಿಸಬಹುದು. ಅಡ್ಯಾರ್ ಕಟ್ಟೆ-ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರಿಗೆ ಸಂಚರಿಸುವ ಕಾರು/ರಿಕ್ಷಾ/ಬೈಕ್ಗಳು ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ – ಕೊಣಾಜೆ – ದೇರಳಕಟ್ಟೆ -ತೊಕ್ಕೊಟ್ಟು ಮೂಲಕ ಸಂಚರಿಸಬಹುದು. ಪಂಪ್ವೆಲ್ನಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು – ದೇರಳಕಟ್ಟೆ – ಮುಡಿಪು – ಬೊಳಿಯಾರ್ – ಮೆಲ್ಕಾರ್ ಮೂಲಕ ಸಂಚರಿಸಬಹುದು.