
ಕಲಬುರುಗಿ : ಗದಗ ವಾಡಿ ನೂತನ ಮಾರ್ಗಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ರೈಲ್ವೇ ನಿಲ್ದಾಣವನ್ನು ಸಂಸದ ಕೆ.ರಾಜಶೇಖರ ಹಿಟ್ನಾಳ ಪರೀಲಿಸಿದರು.

j3tvkannada
ನಿಲ್ದಾಣದಲ್ಲಿ ಕೈಗೊಳ್ಳಲಾಗಿರುವ ಪ್ರಯಾಣಿಕರ ಪ್ಲಾಟ್ಫಾರ್ಮ್, ನಿಯಂತ್ರಣ ಕೊಠಡಿ ಸೇರಿದಂತೆ, ನೀರು, ನೈರ್ಮಲ್ಯ ವ್ಯವಸ್ಥೆಗೆ ಸಂಬಂಧಿಸಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೈಲು ನಿಲ್ದಾಣ ಕಲಾತ್ಮಕವಾಗಿ ಮತ್ತು ಮಾದರಿ ರೀತಿಯಲ್ಲಿ ನಿರ್ಮಾಣಗೊಳ್ಳಲು ನೈರುತ್ಯ ರೈಲ್ವೇ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೂತನ ಮಾರ್ಗದಲ್ಲಿ ಪ್ರಯಾಣಿಕರ ರೈಲಿನ ಶೀಘ್ರ ಸಂಚಾರಕ್ಕೆ ಸಂಬಂಧಿಸಿದಂತೆ ರೈಲ್ವೇ ಸಚಿವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ನೈರುತ್ಯ ರೈಲ್ವೇ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ ಮುದಗೌಡರ, ಪ್ರಾಯೋಗಿಕ ಪರೀಕ್ಷೆ ಸೇರಿದಂತೆ ಎಲ್ಲಾ ಕೆಲಸಗಳೂ ಪೂರ್ಣಗೊಂಡಿದ್ದು ರೈಲ್ವೇ ಸಂಚಾರಕ್ಕೆ ಚಾಲನೆ ನೀಡುವ ದಿನವನ್ನು ಇಲಾಖೆ ನಿರ್ಧರಿಸಲಿದೆ ಎಂದರು. ಕಾಂಗ್ರೆಸ್ ಮುಖಂಡ ದೊಡ್ಡಬಸವನಗೌಡ ಬಯ್ಯಾಪುರ, ಮಹಾಂತೇಶ ಅಗಸಿಮುಂದಿನ, ಉಮೇಶ ಮಂಗಳೂರು, ದೊಡ್ಡಪ್ಪ ಗೋನಾಳ, ಹೊರಪ್ಯಾಟಿ ಇತರರು ಇದ್ದರು.