
ರಾಯಚೂರು: ದೇವದುರ್ಗ ತಾಲ್ಲೂಕಿನ ಅಮರಾಪುರ ಕ್ರಾಸ್ ಸಮೀಪ ಹಳ್ಳದ ತಡೆಗೋಡೆಗೆ ಶುಕ್ರವಾರ ಬೆಳಗಿನ ಜಾವ ಬುಲೆರೊ ಮ್ಯಾಕ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

j3tvkannada
ನಿಯಂತ್ರಣ ತಪ್ಪಿ ಬಿದ್ದ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಆಂಧ್ರಪ್ರದೇಶದ ನಾಗರಾಜ್, ಸೋಮ, ನಾಗಭೂಷಣ ಹಾಗೂ ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಆನಂದ ಗಂಭೀರವಾಗಿ ಗಾಯಗೊಂಡಿದ್ದು, ರಿಮ್ಸ್ ನಲ್ಲಿ ದಾಖಲು ಮಾಡಲಾಗಿದೆ. ಇವರೆಲ್ಲರೂ ಆಂಧ್ರಪ್ರದೇಶದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆಯುವ ಸಂತೆಗೆ ಕುರಿ ಕೊಂಡುಕೊಳ್ಳಲು ಹೋಗುತ್ತಿದ್ದರು.
ಶಬರಿಮಲೆಗೆ ಹೊರಟಿದ್ದ ಬಸ್ ಕುರುಬರ ಸಂಘದ ಜಿಲ್ಲಾಧ್ಯಕ್ಷ ವಾಹನ ಚಾಲನೆ ಮಾಡಿ ಸುಸ್ತಾಗಿದ್ದ ಆನಂದ ಮಧ್ಯರಾತ್ರಿ ವಾಹನ ಚಾಲನೆ ಮಾಡಲು ಬೇರೊಬ್ಬರಿಗೆ ಕೊಟ್ಟಿದ್ದರು. ಹೊಸ ಚಾಲಕನ ನಿಯಂತ್ರಣ ತಪ್ಪಿ ವಾಹನ ಹಳ್ಳದ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.