
ಹಾವೇರಿ:ಸ್ವಾತಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಕ್ರಾಂತಿವೀರ ಯುವ ಬ್ರಿಗೇಡ್ ವತಿಯಿಂದ ಏ. 23ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಬ್ರಿಗೇಡ್ ಕಾರ್ಯಾಧ್ಯಕ್ಷ ಕೆ.ಈ.ಕಾಂತೇಶ ತಿಳಿಸಿದರು.

j3tvkannada
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಮುಖಂಡ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ರಾಜ್ಯ ಸರ್ಕಾರ, ಲವ್ ಜಿಹಾದ್ಗೆ ಕೈಜೋಡಿಸಿದೆ. ಸ್ವಾತಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕುಟುಂಬಕ್ಕೆ ಮಾಹಿತಿ ನೀಡದೇ ಶವ ಸಂಸ್ಕಾರ ಮಾಡಿದ್ದಾರೆ. ಈ ನಡೆಯು ಅನುಮಾನಕ್ಕೆ ಕಾರಣವಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸ್ ಇಲಾಖೆ ಶಾಮೀಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾತಿ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಾಗುವುದು ಎಂದು ಹೇಳಿದರು.
ಸ್ವಾತಿ ಹತ್ಯೆ, ನೂರಕ್ಕೆ ನೂರರಷ್ಟು ಲವ್ ಜಿಹಾದ್ ಪ್ರಕರಣವಾಗಿದೆ. ಹಿಂದೂ ಯುವಕರನ್ನು ಬಳಸಿಕೊಂಡು ಸ್ವಾತಿ ಅವರನ್ನು ಹತ್ಯೆ ಮಾಡಲಾಗಿದೆ. ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು. ಹಿಂದುತ್ವವಾದಿಗಳ ಕಡೆಗಣನೆ ಬಿಜೆಪಿಯಲ್ಲಿ ಹಿಂದುತ್ವವಾದಿಗಳನ್ನು ಕಡೆಗಣಿಸಲಾಗುತ್ತಿದೆ. ಕೆ.ಎಸ್. ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶೀಘ್ರವೇ ಬಿಜೆಪಿಗೆ ಬರುತ್ತಾರೆ ಎಂದು ಕಾಂತೇಶ ವಿಶ್ವಾಸ ವ್ಯಕ್ತಪಡಿಸಿದರು. ಅನಂತಕುಮಾರ ಹೆಗಡೆ, ಪ್ರತಾಪ ಸಿಂಹ, ಸಿ.ಟಿ. ರವಿ ಹಾಗೂ ಇತರೆ ಹಿಂದುತ್ವವಾದಿಗಳನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ. ಬಿಜೆಪಿ ಹೈಕಮಾಂಡ್ ಹಿಂದುತ್ವವಾದಿಗಳ ಬಗ್ಗೆ ಗಮನ ಹರಿಸುತ್ತಿಲ್ಲವೇಕೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಯತ್ನಾಳ ಉಚ್ಚಾಟನೆಯಿಂದ ಪಕ್ಷಕ್ಕೆ ನಷ್ಟ ಆಗಲಿದೆ ಎಂದರು.