
ಶಿವಮೊಗ್ಗ: ತಾಲ್ಲೂಕಿನ ಭೀಮನೇರಿ ಗ್ರಾಮದ ಸಮೀಪ ಶುಂಠಿ ತುಂಬಿದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿದೆ.

j3tvkannada
ಸಾಗರದಿಂದ ಶುಂಠಿ ತುಂಬಿಕೊಂಡು ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿ ಹಾಗೂ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ರಸ್ತೆಗೆ ಅಡ್ಡವಾಗಿ ಬಂದ ಹಾವನ್ನು ತಪ್ಪಿಸಲು ಕಾರಿನ ಚಾಲಕ ಹೋದಾಗ ಈ ಅಪಘಾತ ಉಂಟಾಗಿದೆ ಎಂದು ಹೇಳಲಾಗಿದೆ. ಅದೃಷ್ಟಶ ಯಾರಿಗೂ ಅಪಾಯವಾಗಿಲ್ಲ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.