ಚಿಕ್ಕಬಳ್ಳಾಪುರ: ಸಾದಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದರೂ ಇದು ಯಾರ ಕಣ್ಣಿಗೂ ಕಾಣುತ್ತಿಲ್ಲ,ಅಧಿಕಾರಿಗಳು, ಜನಪ್ರತಿನಿಧಿಗಳಿಗೆ, ಎಷ್ಟೇ ಮನವಿ ಸಲ್ಲಿಸಿದರು ಕೂಡಾ ಪ್ರಯೋಜನವಾಗಿಲ್ಲ. ಈ ರಸ್ತೆಯಲ್ಲಿ ದಿನಕ್ಕೆ ಸಾವಿರಾರು ಜನರು ಓಡಾಡುತ್ತಾರೆ. ಆದರೆ ರಸ್ತೆ ಸರಿಯಿಲ್ಲದ ಕಾರಣ ಹಲವಾರು ತೊಂದರೆಗಳನ್ನು ಇಲ್ಲಿನ ಸ್ಥಳೀಯರು ಅನುಭವಿಸುತ್ತಿದ್ದಾರೆ.

ಗ್ರಾಮದ ಸುಮಾರು ನಾಲ್ಕೂವರೆ ಕಿಲೋ ಮೀಟರ್ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂಗಳ ಪ್ರಸ್ತಾವನೆಯಾಗಿದೆ, ಇದನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಬಿಡುಗೊಡೆಗೊಳಿಸಲು ಸರ್ಕಾರಕ್ಕೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಹೋಬಳಿಯ ಸಾಮಾಜಿಕ ಹೋರಾಟಗಾರರು ಹಾಗು ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಧರಣಿ ನಡೆಯುತ್ತಿದೆ. ಬಿಜೆಪಿ ಮುಖಂಡ ಸಿಕಲ್ ಆನಂದ ಗೌಡ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.