
ದಕ್ಷಿಣ ಕನ್ನಡ: ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ನಡೆಯುತ್ತಿದ್ದ ವೇಳೆ ದೇವರ ತೇರಿನ ಮೇಲ್ಬಾಗ ಮುರಿದು ಬಿದ್ದಿರುವ ಘಟನೆ ನಡೆದಿದೆ. ಶನಿವಾರ ಬೆಳಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವದ ತೇರಿನ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ರಥದಲ್ಲಿ ಕುಳಿತಿದ್ದರು. ಕೆಳಗಡೆ ಸಾವಿರಾರು ಭಕ್ತರು ರಥ ಎಳೆಯುವುದರಲ್ಲಿ ತಲ್ಲೀನರಾಗಿದ್ದರು.

j3tvkannada
ಏಕಾ ಏಕಿ ರಥವನ್ನು ನಿಗ್ರಹಿಸುವ ದಂಡ ತುಂಡಾದ ಪರಿಣಾಮ ರಥದ ಮೇಲ್ಬಾಗ ಸಂಪೂರ್ಣ ಧರೆಗೆ ಉರುಳಿದೆ. ಒಬ್ಬರು ಅರ್ಚಕರಿಗೆ ಸಣ್ಣಪುಟ್ಟ ತರಚಿದ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯು ಭಕ್ತ ಸಮೂಹದಲ್ಲಿ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ಮುಂದುವರಿಸಲಾಯಿತು. ಯಾವುದೇ ವಿಘ್ನವಿಲ್ಲದೆ ಜಾತ್ರೋತ್ಸವ ಮುಂದುವರಿದಿದೆ.