
ದಕ್ಷಿಣ ಕನ್ನಡ: ಮುನ್ನೂರು ಬಂಗುಲೆ ಸಮೀಪ ಸಾಮೂಹಿಕ ಅತ್ಯಾಚಾರಕ್ಕೀಡಾದ ಪಶ್ಚಿಮ ಬಂಗಾಳದ ಯುವತಿಯ ಅಕ್ಕ, ಆಟೊ ಚಾಲಕನಿಗೆ ₹2 ಸಾವಿರವನ್ನು’ಗೂಗಲ್ ಪೇ‘ ಮೂಲಕ ಪಾವತಿಸಿ, ತಂಗಿಯನ್ನು ಸುರಕ್ಷಿತವಾಗಿ ರೈಲು ಹತ್ತಿಸುವಂತೆ ಕೇಳಿಕೊಂಡಿದ್ದಳು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿಗಳಾದ ಆಟೊ ಚಾಲಕ ಪ್ರಭುರಾಜ್, ಆತನ ಸ್ನೇಹಿತರಾದ ಮಣಿ, ಮಿಥುನ್ ಎಂಬುವವರನ್ನು ಘಟನೆ ನಡೆದ 24ಗಂಟೆಯೊಳಗೆ ಬಂಧಿಸಲಾಗಿತ್ತು.

j3tvkannada
ಸಂತ್ರಸ್ತೆಯು ಸುಮಾರು 3 ತಿಂಗಳ ಹಿಂದೆ ಪ್ರಿಯತಮನ ಜತೆ ಕೇರಳದ ಕಡೆಗೆ ಕೆಲಸಕ್ಕೆ ಬಂದಿದ್ದಳು. ಏ.16ರಂದು ಇಬ್ಬರ ನಡುವೆ ಜಗಳ ನಡೆದಿದ್ದು, ಪ್ರಿಯತಮ ಜಗಳ ಮಾಡಿ ಮೊಬೈಲ್ ಒಡೆದು ಹಾಕಿ ಮನೆಯಿಂದ ಹೊರ ಹಾಕಿದ್ದಾನೆ. ಇದರಿಂದ ನೊಂದ ಯುವತಿ ಕೇರಳದಿಂದ ಮಂಗಳೂರಿಗೆ ಬರುವ ರೈಲು ಹತ್ತಿದ್ದಳು.
ಮಂಗಳೂರಿನಲ್ಲಿ ಇಳಿದ ಆಕೆ ಊರಿಗೆ ಹೋಗಲು ಹಣವಿಲ್ಲದೆ ಅಸಹಾಯಕಳಾಗಿದ್ದಳು. ಈ ಬಗ್ಗೆ ಪ್ರಭುರಾಜ್ ಜೊತೆಗೆ ಅಲವತ್ತುಕೊಂಡಿದ್ದಳು. ಅದನ್ನೇ ದುರ್ಬಳಕೆ ಮಾಡಿಕೊಂಡ ಆತ ಆಕೆಯ ಮೊಬೈಲ್ ರಿಪೇರಿ ಮಾಡಿ ಪಶ್ಚಿಮ ಬಂಗಾಳದಲ್ಲಿರುವ ಸಹೋದರಿಗೆ ಕರೆ ಮಾಡುವಂತೆ ತಿಳಿಸಿದ್ದ. ತಂಗಿ ಊರಿಗೆ ಬರುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಆಟೊ ರಿಕ್ಷಾ ಚಾಲಕನ ಸಹಾಯ ಯಾಚಿಸಿದ ಅಕ್ಕ, ₹2 ಸಾವಿರವನ್ನು ಗೂಗಲ್ ಪೇ ಮಾಡಿ ರೈಲು ಹತ್ತಿಸುವಂತೆ ತಿಳಿಸಿದ್ದಳು.

j3tvkannada
ಪಶ್ಚಿಮ ಬಂಗಾಳದ ರೈಲು ತಡವಾಗಿದೆ ಎಂದು ನಂಬಿಸಿ ಸುಮಾರು 6 ಗಂಟೆ ರಿಕ್ಷಾದಲ್ಲೇ ಸುತ್ತಾಡಿಸಿ ಮತ್ತು ಬರುವ ಪಾನೀಯ ಕುಡಿಸಿ ತಡರಾತ್ರಿ ವೇಳೆ ಮೂವರು ಸೇರಿ ಅತ್ಯಾಚಾರವೆಸಗಿದ್ದಾರೆ ಎಂದು ತನಿಖೆ ವೇಳೆ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಮಿಥುನ್ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಇದೆ. ಡೆಲಿವರಿ ಬಾಯ್ ಮಣಿ ವಿರುದ್ಧ ಕಂಕನಾಡಿ ಠಾಣೆಯಲ್ಲಿ ಕಳವು ಪ್ರಕರಣ ಇದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏ.25ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ. ಸಂತ್ರಸ್ತೆ ಚೇತರಿಸಿಕೊಂಡಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಶುಕ್ರವಾರದ ಸಂಜೆವರೆಗೂ ಆಕೆಯ ಮನೆಯಿಂದ ಯಾರೂ ಬಂದಿಲ್ಲ. ಆಕೆಯನ್ನು ಊರಿನಿಂದ ಕರೆ ತಂದ ಪ್ರಿಯತಮನ ವಿಚಾರಣೆಯೂ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.