
ಹಾವೇರಿ : ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗದವರಿಗೆ ಉಳಿಮೆಗಾಗಿ ಭೂಮಿ, ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ಹಾಗೂ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ವ್ಯವಸಾಯ ಕೂಲಿ ವೃತ್ತಿಪರ ಯೂನಿಯನ್ ವತಿಯಿಂದ ಶನಿವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

j3tvkannada
ಯೂನಿಯನ್ ಜಿಲ್ಲಾ ಘಟಕದ ಅಧ್ಯಕ್ಷ ಕಾಂತೇಶ ಮುಗಳಿಹಳ್ಳಿ ಮಾತನಾಡಿ, ಕಾರ್ಮಿಕರ ಕಾಯ್ದೆಯಡಿ ಸೌಲಭ್ಯಗಳನ್ನು ಜಾರಿಗೆ ತರಬೇಕು, ಜಿಲ್ಲೆಯಲ್ಲಿ ಕಳೆದ 20 ವರ್ಷಗಳಿಂದ ಗುಡಿಸಲಿನಲ್ಲಿ ವಾಸಿಸುವ ಜನರಿಗೆ ಪಟ್ಟಾ ವಿತರಿಸಿ, ಸರ್ಕಾರದಿಂದ ಮನೆ ನಿರ್ಮಿಸಿ ಕೊಡಬೇಕು. ಭೂರಹಿತರಿಗೆ ಕೃಷಿ ಭೂಮಿ ನೀಡುವಂತೆ ಮನವಿ ಮಾಡಿಕೊಂಡರು. ಅಸಂಘಟಿತ ಕೃಷಿ ಕಾರ್ಮಿಕ ಮಹಿಳೆಯರಿಗೆ ₹60 ಸಾವಿರ ಹೆರಿಗೆ ಭತ್ಯೆ ಮತ್ತು 6 ತಿಂಗಳು ಹೆರಿಗೆ ರಜೆಯನ್ನು ಮಂಜೂರು ಮಾಡಬೇಕು. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. ರಾಜ್ಯ ಸಮಿತಿ ಸದಸ್ಯರಾದ ನಾಗಪ್ಪ ಮಾಳಗಿ, ಹನುಮಂತಪ್ಪ ಆಲದಕಟ್ಟಿ, ಜಯಮ್ಮ ದೊಡ್ಡಮನಿ, ಲಲಿತಾ ಹರಿಜನ, ಬ್ಯಾಡಗಿ ತಾಲ್ಲೂಕು ಘಟಕದ ಅಧ್ಯಕ್ಷ ಮಂಜಣ್ಣ ವೀರಾಪುರ, ಕಾಮಾಕ್ಷಿ ರೇವಣಕರ, ನಾಗರಾಜ ಮುಳುರ, ಚನ್ನಬಸಪ್ಪ ದೊಡ್ಡನಿ ಹಾಗೂ ಇನ್ನಿತರರು ಇದ್ದರು.