
ಕೋಲಾರ : ಗ್ರಾಮವೊಂದರಲ್ಲಿ ಪೋಷಕರು ಬಾಲಕಿಯ ಮದುವೆ ಮಾಡಲು ಮುಂದಾಗಿದ್ದು, ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಶನಿವಾರ ಬಾಲ್ಯ ವಿವಾಹ ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ.

j3tvkannada
ಬಾಲ್ಯ ವಿವಾಹ ಮಾಡಲು ಪೋಷಕರು ಮುಂದಿನ ತಿಂಗಳನಲ್ಲಿ ಸಕಲ ತಯಾರಿ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುನಿರಾಜು ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ಬಾಲಕಿಯ ಮನೆಗೆ ತೆರಳಿ, ಪೊಲೀಸ್ ನೆರವಿನೊಂದಿಗೆ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ ಎಂದು ಪಾಲಕರ ಹಾಗೂ ಸಂಬಂಧಿಕರ ಮನವೊಲಿಸಿ ಬಾಲ್ಯ ವಿವಾಹ ಮಾಡಿಸದಂತೆ ಕಾನೂನಿನ ಅರಿವು ಮೂಡಿಸಿದರು. ನಂತರ ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ, ಪೋಷಣೆಗಾಗಿ ಕೆಜಿಎಫ್ ಬಾಲ ಮಂದಿರಕ್ಕೆ ದಾಖಲಿಸಿದ್ದಾರೆ.