
ಬೀದರ್: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಬೀದರ್ನಲ್ಲಿ ನಡೆದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು, ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರಿಗಳದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು.

j3tvkannada
ಜನಿವಾರ ಧರಿಸಿದ ಕಾರಣಕ್ಕಾಗಿ ಕೆ-ಸಿ.ಇ.ಟಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಸಿಗದೆ ಪರೀಕ್ಷೆಯಿಂದ ವಂಚಿತರಾಗಿದ್ದ ನಗರದ ಚೌಬಾರ ನಿವಾಸಿ ಸುಚಿವ್ರತ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭಾನುವಾರ ಬೆಳಿಗ್ಗೆ ಭೇಟಿ ನೀಡಿ, ವಿದ್ಯಾರ್ಥಿಗೆ ಸಾಂತ್ವನ ಹೇಳಿ ಧೈರ್ಯವನ್ನು ತುಂಬಿದರು.
ವಿದ್ಯಾರ್ಥಿ ಸುಚಿವ್ರತ್ ಹಾಗೂ ಪೋಷಕರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಎಂಜಿನಿಯರಿಂಗ್ ಕೋರ್ಸ್ ಮಾಡುವುದಾದರೆ ನನ್ನ ಕಾಲೇಜಿನಲ್ಲೇ ಉಚಿತ ಪ್ರವೇಶ ಕೊಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.
ಪರೀಕ್ಷಾ ಕೇಂದ್ರದ ಸಿಬ್ಬಂದಿ ತಪ್ಪು ಮಾಡಿದ್ದಾರೆ. ಅದರಲ್ಲಿ ಎರಡು ಮಾತಿಲ್ಲ ಎಂದು ತಿಳಿಸಿದರು.