
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಭಾನುವಾರ ಬೆಳಿಗ್ಗೆ ನಿಧನರಾದರು.

j3tvkannada
ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ತೀವ್ರವಾಗಿ ಗಾಯಗೊಂಡು ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಅವರ ಬೆನ್ನುಹುರಿಗೆ ತೀವ್ರ ಪೆಟ್ಟಾಗಿತ್ತು. ಕಾಪು ತಾಲ್ಲೂಕಿನ ಶಿರ್ವ ನಿವಾಸಿಯಾಗಿರುವ ಅವರಿಗೆ ತಂದೆ, ತಾಯಿ, ಸಹೋದರ ಹಾಗೂ ಸಹೋದರಿ ಇದ್ದಾರೆ.