
ಹಾವೇರಿ: ಶಿಗ್ಗಾವಿ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ವಿವಿಧೋದ್ದೇಶಗಳಿಗಾಗಿ ಖಾಲಿ ನಿವೇಶನ ಮಂಜೂರು ಮಾಡುವಂತೆ ಒತ್ತಾಯಿಸಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

j3tvkannada
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಯು ವೀರಶೈವ ಲಿಂಗಾಯತ ಸಮುದಾಯದ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಸುಮಾರು 120 ವರ್ಷಗಳ ಇತಿಹಾಸ ಹೊಂದಿದ ಮಹಾಸಭೆಯು ಸಾಮಾಜಿಕ ಶೈಕಣಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಸಮುದಾಯದ ಆಶಯಗಳನ್ನು ಈಡೇರಿಸುವ ಸದುದ್ದೇಶ ಹೊಂದಿದೆ ಎಂದರು.
ಸುಮಾರು 2 ಲಕ್ಷಕ್ಕೂ ಹೆಚ್ಚಿನ ಸದಸ್ಯಬಲ ಹೊಂದಿರುವ ಸಂಸ್ಥೆ ರಾಜ್ಯ ಘಟಕಗಳು, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು ಸಮಾಜ ರಾಜ್ಯಗಳಲ್ಲಿದ್ದು, ಸಂಘಟನೆಯಲ್ಲಿ ಸಕ್ರೀಯವಾಗಿವೆ. ಪ್ರತಿಯೊಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಮತ್ತು ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಿಸುವುದು ಮಹಾಸಭೆಯ ಗುರಿಯಾಗಿದೆ ಎಂದು ತಿಳಿಸಿದರು.
ಶಿಗ್ಗಾವಿ ತಾಲ್ಲೂಕು ಘಟಕವು ತಾಲ್ಲೂಕಿನಲ್ಲಿ ವೀರಶೈವ ಲಿಂಗಾಯತ ಭವನ ಮತ್ತು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿ ಬೇಕಾಗಿರುವ ಉಚಿತ ವಸತಿ ನಿಲಯ, ಆಟದ ಮೈದಾನ, ತರಬೇತಿ ಕೇಂದ್ರ ಇತ್ಯಾದಿಗಳನ್ನು ಸ್ಥಾಪಿಸಲು ಭೂಮಿಯ ಅವಶ್ಯವಿದ್ದು, ಪುರಸಭೆ ವತಿಯಿಂದ ನಿವೇಶನ ನೀಡಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ರಾಗಿ, ಡಿ.ಎ.ಗೊಬ್ಬರಗುಪ್ಪಿ,ಮಾಲತೇಶ ಯಲಿಗಾರ, ಟಿ.ವಿ.ಸುರಗಿಮಠ, ಸಿದ್ದಣ್ಣ ಮೊರಬದ, ಉಮೇಶಗೌಡ ಪಾಟೀಲ, ಶಶಿಧರ ಸುರಗಿಮಠ, ಚಂದ್ರು ಜವಳಿ, ಜಿ.ಎನ್ ಯಲಿಗಾರ, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ಮಲ್ಲೇಶ ಆರ್. ಇದ್ದರು.