
ಬೆಂಗಳೂರು: ಇತ್ತೀಚೆಗಂತೂ ಕೊಲೆ ಎಂಬುದು ಕೇವಲ ಒಂದು ಸೊಳ್ಳೆಯನ್ನು ಕೊಂದಷ್ಟೇ ಈಸೀಯಾಗಿದೆ ಕೆಲ ದುಷ್ಕರ್ಮಿಗಳಿಗೆ. ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ. ಕರವೇ ಕಾರ್ಯಕರ್ತೆಯಾಗಿದ್ದ ಮಂಗಳಮುಖಿ ತನುಶ್ರೀ (40) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವವರ ಜೊತೆ ವಿವಾಹವಾಗಿದ್ದರು. ಮೂರು ದಿನಗಳ ಹಿಂದೆ ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಮಂಗಳಮುಖಿ ತನುಶ್ರೀ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪತಿ ಜಗನ್ನಾಥ್ ಮತ್ತು ಮನೆಗೆಲಸದಾಕೆ ಪರಾರಿಯಾಗಿದ್ದಾರೆ. ತನುಶ್ರೀ ಅವರು ಸಂಗಮ ಎಂಬ ಹೆಸರಿನ ಎನ್.ಜಿ.ಒ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.