
ಶಿವಮೊಗ್ಗ: ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಸೋಮವಾರ ಕಾರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಉಪಚರಿಸಿ ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.

j3tvkannada
ಮಧು ಬಂಗಾರಪ್ಪ ಅವರು ಹೊಸನಗರದಲ್ಲಿ ಜನಸ್ಪಂದನಾ ಸಭೆಗೆ ಹೋಗುವ ಮಾರ್ಗದ ಮಧ್ಯೆ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ತಕ್ಷಣ ಸ್ಪಂದಿಸಿದ ಸಚಿವರು ಗಾಯಾಳುಗಳಿಗೆ ಧನಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.
ತಾಲ್ಲೂಕಿನ ಗೆಂಡ್ಲ ಹೊಸೂರು ಗ್ರಾಮದ ಮೆಹಬೂಬ್ ಸಾಬ್ ಹಾಗೂ ಪ್ರಜ್ವಲ್ ಅವರು ಬೈಕ್ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕಾರ್ ಡಿಕ್ಕಿ ಹೊಡೆದಿತ್ತು. ಗ್ರಾಮಸ್ಥರ ಬಳಿ ಮಾಹಿತಿ ಪಡೆದು ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀರಿಗೆ ಸಚಿವರು ಸೂಚಿಸಿದರು. ತಮ್ಮ ಆಪ್ತ ಸಹಾಯಕನನ್ನು ಆಸ್ಪತ್ರೆಗೆ ಕಳುಹಿಸಿ ಗಾಯಾಳುಗಳ ಆರೋಗ್ಯದ ಮಾಹಿತಿ ನೀಡುವಂತೆಯೂ ಸೂಚಿಸಿದರು.