
ಚಿತ್ರದುರ್ಗ: ರಾಜ್ಯ ವಕೀಲರ ಪರಿಷತ್ ಸದಸ್ಯ ಸದಾಶಿವರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಸೋಮವಾರ ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕರ್ತವ್ಯ ನಿರತ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಒತ್ತಾಯಿಸಿದರು.

j3tvkannada
ನ್ಯಾಯಾಲಯದ ಕಾರ್ಯ ಕಲಾಪಗಳಿಂದ ಹೊರಗುಳಿದ ವಕೀಲರು ಬಲಗೈ ತೋಳಿಗೆ ಕೆಂಪು ಪಟ್ಟಿ ಧರಿಸಿ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರರ್ಗೆ ಮನವಿ ಸಲ್ಲಿಸಿದರು. ಇದಕ್ಕೂ ಮೊದಲು ವಕೀಲರ ಸಂಘದಲ್ಲಿ ಸಭೆ ನಡೆಸಿ ಪ್ರತಿಭಟನೆ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು. ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ, ಉಪಾಧ್ಯಕ್ಷೆ ಬೀನಾರಾಣಿ, ಪ್ರಧಾನ ಕಾರ್ಯದರ್ಶಿ ಚಿತ್ರಲಿಂಗಪ್ಪ, ಜಂಟಿ ಕಾರ್ಯದರ್ಶಿ ವೆಂಕಟೇಶ್ ಶಿಲ್ಪಿ, ಖಜಾಂಚಿ ಸೈಯದ್ ನವಾಜ್, ವಕೀಲರಾದ ಎಸ್.ಜಯಣ್ಣ, ಟಿ.ರಂಗನಾಥ್, ಕೆ.ವಿ. ದಯಾನಂದ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.