
ರಾಯಚೂರು: ಮಸ್ಕಿ ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಕುರಿ ಕಾಯಲು ಹೋಗಿದ್ದ ವ್ಯಕ್ತಿಗೆ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದಾರೆ.

j3tvkannada
ಗಾಯಗೊಂಡಿದ್ದ ವ್ಯಕ್ತಿಯನ್ನು ಲಿಂಗಸುಗೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿದೆ. ಕಂದಾಯ ಇಲಾಖೆಯ ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಮಿದುಳಿಗೆ ಪೆಟ್ಟು ಬಿದ್ದಿರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರಿಂದ ಗಾಯಾಳನ್ನು ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.