
ಕೊಪ್ಪಳ: ಶ್ರೀನಗರ ಪ್ರವಾಸ ಕೈಗೊಂಡಿರುವ ಕೊಪ್ಪಳದ ನಾಲ್ಕು ಕುಟುಂಬಗಳ 19 ಜನ ಸದಸ್ಯರು ಸುರಕ್ಷಿತವಾಗಿದ್ದಾರೆ. ಕೊಪ್ಪಳದ ಸಿದ್ದು ಗಣವಾರಿ, ಉದ್ಯಮಿ ಶರಣಪ್ಪ ಸಜ್ಜನ, ಕಾಂಗ್ರೆಸ್ ಮುಖಂಡ ಕಾಟನ್ ಪಾಷಾ ಮತ್ತು ಶಿವಕುಮಾರ ಪಾವಲಿ ಶೆಟ್ಟರ್ ಕುಟುಂಬ ಸದಸ್ಯರ ಜೊತೆ ಮಂಗಳವಾರ ಸಂಜೆ ಮುಂಬೈನಿಂದ ಶ್ರೀನಗರಕ್ಕೆ ತೆರಳಿದ್ದಾರೆ. ಘಟನೆ ತಿಳಿದು ಆತಂಕಗೊಂಡಿದ್ದು ಪ್ರವಾಸ ಮುಂದುವರಿಸಬೇಕೇ, ವಾಪಸ್ ಬರಬೇಕೇ? ಎನ್ನುವ ಗೊಂದಲದಲ್ಲಿದ್ದಾರೆ.

j3tvkannada
ಭಯೋತ್ಪಾದಕರ ದಾಳಿ ನಡೆದ ಸ್ಥಳದಿಂದ ಶ್ರೀನಗರ 100 ಕಿ.ಮೀ. ದೂರದಲ್ಲಿದೆ. ಮಂಗಳವಾರ ಸಂಜೆ 6.30ರ ಸುಮಾರಿಗೆ ಶ್ರೀನಗರ ತಲುಪಿ ಹೋಟೆಲ್ಗೆ ಬಂದ ಬಳಿಕ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ದುರ್ಘಟನೆ ನಡೆದಿದ್ದು ಗೊತ್ತಾಯಿತು. ಆಗಿನಿಂದ ಹೋಟೆಲ್ನಲ್ಲಿಯೇ ಉಳಿದುಕೊಂಡಿದ್ದೇವೆ. ಐದು ದಿನಗಳ ಪ್ರವಾಸಕ್ಕಾಗಿ ಬಂದಿದ್ದೇವೆ. ಮುಂದೇನು ಮಾಡಬೇಕು ಎನ್ನುವುದನ್ನು ನಿರ್ಧರಿಸಿಲ್ಲ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಬರುತ್ತಿದ್ದಾರೆ ಎನ್ನುವ ಮಾಹಿತಿ ಗೊತ್ತಾಗಿದೆ.
ಅವರನ್ನು ಭೇಟಿಯಾಗುತ್ತೇವೆ’ ಎಂದು ಶ್ರೀನಗರಕ್ಕೆ ತೆರಳಿರುವ ಕೊಪ್ಪಳ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಾಟನ್ ಪಾಷಾ ತಿಳಿಸಿದರು. ಶ್ರೀನಗರದಲ್ಲಿರುವ ಕೊಪ್ಪಳದ ನಿವಾಸಿಗಳು ಸುರಕ್ಷಿತವಾಗಿದ್ದಾರೆ. ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಹೇಳಿದರು.