ಕೊಪ್ಪಳ: ಜಿಲ್ಲೆಯಲ್ಲಿ ಯಾವುದೇ ಒಂದು ಕಾರ್ಖಾನೆಗೆ ಚಾಲನೆ ನೀಡಬೇಕಾದರೆ ಅದಕ್ಕೆ ಮೊದಲು ಅದರಿಂದ ಸಾರ್ವಜನಿಕರಿಗೆ ತೊಂದರೆ ಆಗಬಹುದೇ ಎಂಬ ಆಲೋಚನೆ ಮಾಡಬೇಕಾಗುತ್ತದೆ. ಅದೇನನ್ನೂ ಮಾಡದೆ, ಕಾರ್ಖಾನೆಯಿಂದ ಆಗುವ ಸಾಧಕ ಬಾಧಕಗಳ ಬಗ್ಗೆ ತಿಳಿಯದೆ ಏಕಾ ಏಕಿ ಕಾರ್ಖಾನೆ ನಿರ್ಮಾಣವಾದರೆ ಜನರು ವಿರೋಧಿಸದೆ ಇರುವುದಿಲ್ಲ. ಅದರಂತೆ ಕೊಪ್ಪಳದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಉಕ್ಕು ಕಾರ್ಖಾನೆಯ ಕಾಮಗಾರಿಯನ್ನು ಕಂಡ ಜನರು ಸಾರ್ವಜನಿಕರಿಗೆ ಅದರಿಂದ ಆಗುವ ತೊಂದರೆಗಳನ್ನು ಸಿ. ಎಂ ಗೆ ಮನನ ಮಾಡಿಸಿದ್ದಾರೆ.
ನಿನ್ನೆ ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜನಪ್ರತಿನಿಧಿಗಳ ನಿಯೋಗ ಮನವಿ ಮಾಡಿತ್ತು. ಆ ಬಳಿಕ ಸಿ.ಎಂ ಅವರು ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಜಿಲ್ಲಾಡಳಿತ ಅದನ್ನು ನಿರ್ಲಕ್ಷಿಸಿದೆ. ಹಾಗಾಗಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸಿ.ಎಂ ಆದೇಶವನ್ನು ಉಲ್ಲಂಘಿಸಿದ ಕೊಪ್ಪಳ ಜಿಲ್ಲಾಡಳಿತದ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಬಲ್ಡೋಟಾ ಕಾರ್ಖಾನೆ ಆರಂಭಕ್ಕೆ ಕೊಪ್ಪಳದ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ರಾಜಕೀಯ ನಾಯಕರು ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಈ ಮಧ್ಯೆ ನಿನ್ನೆ ಕಾಮಗಾರಿ ಸ್ಥಗಿತಗೊಳಿಸುವಂತೆ ಸಿ.ಎಂ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ ಕಾರ್ಖಾನೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಸಿ.ಎಂ ಸೂಚನೆಗೂ ಬಲ್ಡೋಟ ಆಡಳಿತ ಮಂಡಳಿ ಕೇರೇ ಮಾಡಲಿಲ್ಲ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.