
ದಕ್ಷಿಣ ಕನ್ನಡ: ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಸಂದೇಶ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ. ಕಾರ್ಕಳ ನಿವಾಸಿ ಸಯ್ಯದ್ (24) ಆರೋಪಿ. ಆತನ ಅಸಭ್ಯ ವರ್ತನೆಯ ಕುರಿತು ಮಾಹಿತಿ ಪಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26ರಂದು ಉಜಿರೆಯಲ್ಲಿ ಆತನನ್ನು ಥಳಿಸಿದ್ದಾರೆ.

j3tvkannada
ಬಳಿಕ ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ನೂರಾರು ಯುವತಿಯರ ಹಾಗೂ ಆತನ ಅಶ್ಲೀಲ ಫೋಟೊ, ವೀಡಿಯೊ ಪತ್ತೆಯಾಗಿದ್ದು, ಆರೋಪಿಯನ್ನು ಹಿಂದೂ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನಂತೆ ಸಯ್ಯದ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಿಸಿದ ಪೊಲೀಸರು, ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.