
ಉಡುಪಿ: ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯ ಪರ್ವದಿನವಾದ ಏ. 30ರಂದು ಸಂಜೆ 4ಗಂಟೆಗೆ ಕೃಷ್ಣ ಮಠದ ವಸಂತ ಮಹಲ್ ಮಧ್ವಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

j3tvkannada
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೆಯ ಚಿನ್ನ ನೀಡಲು ಅವಕಾಶವಿದೆ. ಜೊತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದಾಗಿದೆ ಎಂದು ಅವರು ಹೇಳಿದರು. ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ದಿವಾನ್ ನಾಗರಾಜ ಆಚಾರ್ಯ, ರಮೇಶ್ ಭಟ್ ಇದ್ದರು.