
ದಕ್ಷಿಣ ಕನ್ನಡ: ರೈಲ್ವೆ ನೇಮಕಾತಿ ಮಂಡಳಿಯು ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವಾಗ ಧಾರ್ಮಿಕ ಸಂಕೇತಗಳಾದ ಮಂಗಳಸೂತ್ರ, ಜನಿವಾರ ಮೊದಲಾವುಗಳನ್ನು ಧರಿಸುವಂತಿಲ್ಲ ಎಂದು ಪರೀಕ್ಷೆ ಪ್ರವೇಶಪತ್ರದಲ್ಲಿ ಉಲ್ಲೇಖಿಸಿತ್ತು. ಇದು ದಕ್ಷಿಣ ಕನ್ನಡ ಸೇರಿದಂತೆ ಹಲವು ಕಡೆ ವಿವಾದವಾಗಿದ್ದರಿಂದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇದರ ಬಗ್ಗೆ ಇಂದು ಸ್ಪಷ್ಟನೆ ನೀಡಿದ್ದಾರೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ವಿ. ಸೋಮಣ್ಣ ಎಕ್ಸ್ ಖಾತೆ ಮೂಲಕ ಹೇಳಿದ್ದಾರೆ.

j3tvkannada
ಏಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿದ್ದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿದ್ದರು ಎಂದು ತಿಳಿಸಿದ್ದಾರೆ.