
ಬೀದರ್: ಕೇಂದ್ರ ಸರ್ಕಾರವು ವಕ್ಸ್ ಕಾಯ್ದೆಗೆ ತಂದಿರುವ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯ ಜನ ಪಾಲ್ಗೊಂಡಿದ್ದರು.

j3tvkannada
ನಗರದ ಚೌಬಾರ ಸಮೀಪದ ಜಾಮೀಯಾ ಮಸೀದಿಯಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ ಮಹಮೂದ್ ಗಾವಾನ್ ವೃತಗತ, ಶಹಾಗಂಜ್ ಮೂಲಕ ಹಾದು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿದೆ. ತ್ರಿವರ್ಣ ಧ್ವಜ ಹಾಗೂ ಉರ್ದು ಬರಹ ಹೊಂದಿದ ವಕ್ಫ್ ವಿರೋಧಿ ಕಾಯ್ದೆಗೆ ದಿಕ್ಕಾರದ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿದರು. ಪೌರಾಡಳಿತ ಸಚಿವ ರಹೀಂ ಖಾನ್, ಮಂಡಳಿಯ ಅಬ್ದುಲ್ ಖದೀರ್, ಪ್ರಗತಿಪರ ಸಂಘಟನೆಗಳ ಮುಖಂಡರಾದ ಬಾಬುರಾವ್ ಪಾಸ್ವಾನ್, ಮಾರುತಿ ಬೌದ್ಧ, ಬಸವರಾಜ ಮಾಳಗೆ ಮತ್ತಿತರರು ಪಾಲ್ಗೊಂಡಿದ್ದರು.