
ಬೆಳಗಾವಿ : ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಸೋಮವಾರ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ, ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ.

j3tvkannada.in
ನಮ್ಮ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಿಜೆಪಿಯು ತಮ್ಮ ಕಾರ್ಯಕರ್ತರನ್ನು ಕಳುಹಿಸಿ ಕಪ್ಪು ಬಾವುಟ ಪ್ರದರ್ಶಿಸಿ ಗದ್ದಲ ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪ್ರವೃತ್ತಿ ಹೀಗೆ ಮುಂದುವರೆದರೆ ರಾಜ್ಯದಲ್ಲಿ ನೀವು ಒಂದೇ ಒಂದು ಸಭೆ ಮಾಡಲು ನಾವು ಅವಕಾಶ ನೀಡುವುದಿಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ” ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆಯನ್ನು ನೀಡಿದ್ದಾರೆ.
ಬಿಜೆಪಿ ನಾಯಕರೇ ನೀವು ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ ಸರಿ ಮಾಡಿಕೊಂಡರೆ ಒಳ್ಳೆಯದು. ಇಲ್ಲವಾದರೆ, ಎಲ್ಲಾ ರೀತಿಯ ಪ್ರತಿ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ. ಇದು ಮನವಿಯಲ್ಲ ನಮ್ಮ ಎಚ್ಚರಿಕೆ ಎನ್ನುವುದನ್ನು ಗಮನಿಸಿ ಎಂದು ಉಪ ಮುಖ್ಯಮಂತ್ರಿಗಳು ಕಿಡಿಕಾರಿದರು.
ನಾನು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡುತ್ತೇನೆ. ಪೆಟ್ರೋಲ್, ಡೀಸೆಲ್, ಚಿನ್ನ, ಕಬ್ಬಿಣ, ಸಿಮೆಂಟ್ ಬೆಲೆ ಏರಿಕೆ ಯಾಕೆ ಆಗಿದೆ ಎಂದು ಬಿಜೆಪಿಯವರನ್ನು ಪ್ರಶ್ನಿಸಿ ಎಂದು ಕರೆ ನೀಡಬೇಕಾಗುತ್ತದೆ. ನೀವು ನಮ್ಮ ವಿರುದ್ಧ ಹೋರಾಟ ಮಾಡುವುದಕ್ಕಿಂತ, ನಾವು ನಿಮ್ಮ ವಿರುದ್ಧ ಹೋರಾಟ ಮಾಡಲು ನನಗೆ ಹೆಚ್ಚಿನ ಕಾರ್ಯಕ್ಷಮತೆ ಇದೆ ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ಹೊರ ಹಾಕಿದರು.
ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ. ಬ್ರಿಟಿಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ – RSS ಅನ್ನೂ ಎದುರಿಸಿ ನಿಲ್ಲುವ ಶಕ್ತಿ ಇದೆ. ನಾವು ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವೆ ಎಂದು ಈ ಕಾರ್ಯಕ್ರಮದಲ್ಲಿ ಸಿ.ಎಂ ಸಿದ್ದರಾಮಯ್ಯ ಹೇಳಿದರು.