
ವಿಜಯನಗರ: ತುಂಗಭದ್ರಾ ಅಣೆಕಟ್ಟೆಯ 32 ಕ್ರಸ್ಟ್ಗೇಟ್ಗಳನ್ನು ಬದಲಿಸಲು ಕರೆಯಲಾಗಿದ್ದ ಟೆಂಡರ್ ಅವಧಿಯನ್ನು ಒಂದು ವಾರ ವಿಸ್ತರಿಸಲಾಗಿದೆ.

j3tvkannada
ಇ-ಟೆಂಡರ್ ಅನ್ನು ಸೋಮವಾರ ತೆರೆಯಬೇಕಿತ್ತು. ಆದರೆ, ₹60 ಕೋಟಿಗೂ ಹೆಚ್ಚು ವೆಚ್ಚದ ದೊಡ್ಡ ಕಾಮಗಾರಿ ನಿಭಾಯಿಸುವ ಸಮರ್ಥ ಕಂಪನಿಗಳು ಟೆಂಡರ್ನಲ್ಲಿ ಪಾಲ್ಗೊಂಡಿಲ್ಲ. ಅದಕ್ಕೆ ಅದರ ಅವಧಿ ಒಂದು ವಾರ ಮುಂದಕ್ಕೆ ಹಾಕಲಾಗಿದೆ. ಮೇ 5 ರಂದು ಟೆಂಡರ್ ತೆರೆಯಲಾಗುವುದು ಎಂದು ತುಂಗಭದ್ರಾ ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದರು. 33ನೇ ಗೇಟ್ ಅಳವಡಿಕೆ ಕಾಮಗಾರಿ ಮೇ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ.