
ಉಡುಪಿ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪತ್ಯೇತರ ಚಟುವಟಿಕೆ ಹಾಗೂ ನೀತಿ-ನಿಯಮಗಳನ್ನು ರೂಪಿಸುವ ಹುದ್ದೆಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರೆ ನೀಡಿದರು.

j3tvkannada
ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಡುಪಿಯ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪಿ.ಬಿ. ಪ್ರಸನ್ನ, ಸರ್ಕಾರಿ ಕಾಲೇಜುಗಳ ಪ್ರಾಮುಖ್ಯತೆ ಮತ್ತು ಸೌಲಭ್ಯಗಳ ಕುರಿತು ಮಾತನಾಡುವುದರೊಂದಿಗೆ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮೈಗೂಡಿಸಿಕೊಳ್ಳಬೇಕಾದ ಮಾನವೀಯ ಮೌಲ್ಯಗಳನ್ನು ವಿವರಿಸಿದರು.
ಮುಖಂಡ ಲಾಲಾಜಿ ಆರ್. ಮೆಂಡನ್, ಕಾಪು ಕಾಲೇಜು ಬೆಳೆದು ಬಂದ ದಾರಿಯಲ್ಲಿ ಶ್ರಮಿಸಿದವರನ್ನು ಸ್ಮರಿಸಿದರು. ಇದೆ ಸಂದರ್ಭ ಕಾಲೇಜಿನ ಗ್ರಂಥಾಲಯ ಉದ್ಘಾಟಿಸಲಾಯಿತು. ಕಾಲೇಜಿಗೆ ಹೊಸ ಲಾಂಛನ ಬಿಡುಗಡೆ ಮಾಡಲಾಯಿತು. ಲಾಂಛನ ವಿನ್ಯಾಸ ಮಾಡಿದ ದ್ವಿತೀಯ ಬಿ.ಬಿ.ಎ ವಿದ್ಯಾರ್ಥಿ ವಿಜಯ ಸಾಲಿಯಾನ್ ಅವರನ್ನು ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಎಂ. ಗಾಂಪ್ಟರ್, ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗಳ ವರದಿ ಮಂಡಿಸಿದರು. ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸದಸ್ಯರಾದ ನಾಗೇಶ್, ಅನಿಲ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಯನ ಎಲ್. ಎಂ., ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುನಿತಾ, ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಅಶ್ವಿತಾ ಕರ್ಕೇರ, ಕ್ರೀಡಾ ವಿಭಾಗದ ಸಂಚಾಲಕಿ ಸವಿತಾ, ವಿದ್ಯಾರ್ಥಿ ಸಮಿತಿಯ ಉಪಾಧ್ಯಕ್ಷ ಸಚಿನ್, ಕಾರ್ಯದರ್ಶಿ ಭವ್ಯ ಇದ್ದರು. ವಿದ್ಯಾರ್ಥಿ ಸಮಿತಿಯ ನಾಯಕಿ ನವಮಿ ಸ್ವಾಗತಿಸಿದರು. ಉಪಾಧ್ಯಕ್ಷೆ ರಕ್ಷಾಶ್ರೀ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಅನುಪಮಾ ನಿರೂಪಣೆ ಮಾಡಿದರು.