
ಚಿತ್ರದುರ್ಗ: ಅಂಬೇಡ್ಕರ್ ನೀಡಿರುವ ಸಂವಿಧಾನ ಪಡೆದು ಉನ್ನತ ಹುದ್ದೆ ಅಲಂಕರಿಸಿರುವವರು ಹಾಗೂ ಸಂವಿಧಾನದಿಂದ ಅಧಿಕಾರ ಅನುಭವಿಸುತ್ತಿರುವ ಎಲ್ಲರೂ ಅಂಬೇಡ್ಕರ್ ಅವರನ್ನು ಗೌರವಿಸಬೇಕು ಎಂದು ಭೀಮಸೇನೆ ಅಧ್ಯಕ್ಷ ಶಂಕರ ರಾಮಲಿಂಗಯ್ಯ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಭೀಮ್ ಸೇನೆ ಮತ್ತು ಜೈ ಭೀಮ್ ಸೇನೆಯಿಂದ ತಾಲ್ಲೂಕಿನ ಕೆಲ್ಲೋಡಿನಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣ ಮತ್ತು ಸಂಘಟನೆಯಿಂದ ಹೋರಾಟ ಮಾಡಿ, ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಬಡತನದಲ್ಲಿ ಹುಟ್ಟಿದರೂ ಅವರ ಸಾಧನೆಗೆ ಬಡತನ ಅಡ್ಡಿಯಾಗಲಿಲ್ಲ, ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಸಮುದಾಯ ಅಭಿವೃದ್ಧಿಯಾಗಬಲ್ಲದು ಎಂದರು.

j3tvkannada
ಕರ್ನಾಟಕ ಭೀಮ್ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್, ತಾಲ್ಲೂಕು ಘಟಕದ ಅಧ್ಯಕ್ಷ ರವಿಕುಮಾರ್, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬೋರೇಶ್ ಅರಲಹಳ್ಳಿ, ಪಿ.ಡಿ.ಒ ಸಂತೋಷ್ ಕುಮಾರ್, ಮುಖಂಡರಾದ ಶಿವಕುಮಾರ್, ಮಂಜುನಾಥ್, ರವಿಕುಮಾರ್, ಗೂಳಿಹಟ್ಟಿ ಕೃಷ್ಣಮೂರ್ತಿ, ಮಣಿಕಂಠ, ಮಂಜಪ್ಪ, ರಂಗನಾಥ್, ಅಂಜನ್ ಕುಮಾರ್, ಲಕ್ಷ್ಮೀದೇವಿ, ರೂಪಾ, ಮಮತಾ, ಕ್ರಾಂತಿಮಂಜು, ಶಿವಕುಮಾರ್, ಕರ್ನಾಟಕ ಭೀಮ್ ಸೇನೆ ಮತ್ತು ಜೈ ಭೀಮ್ ಬಾಯ್ಸ್ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರಿದ್ದರು.