
ಗದಗ: ಕಾಶ್ಮೀರದ ಪಹಲ್ಲಾಮ್ನಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯ ಖಂಡಿಸಿ ಪಟ್ಟಣದ ವಿವಿಧ ಹಿಂದೂ ಸಂಘಟನೆಗಳ ವತಿಯಿಂದ ಸೋಮವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು. ಸ್ಥಳೀಯ ಅಂಬಾ ಭವಾನಿ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪೇಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಬೃಹತ್ ಸಭೆಯೊಂದಿಗೆ ಅಗತ್ಯವಾಯಿತು. ಮೆರವಣಿಗೆಯಲ್ಲಿ ನೂರಾರು ಪುರುಷರು ಹಾಗೂ ಮಹಿಳಾ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೆರವಣಿಗೆ ಯುದ್ದಕ್ಕೂ ಪಾಕಿಸ್ತಾನ ವಿರುದ್ಧ ಘೋಷಣೆ ಮೊಳಗಿದವು.

j3tvkananda
ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಖಾನಪ್ಪನವರ ಮಾತನಾಡಿ, ಉಗ್ರರ ದಾಳಿಗೆ ಪ್ರಾಣತೆತ್ತ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ನಡೆಸಿದ ಈ ಪಂಜಿನ ಮೆರವಣಿಗೆ ಹಿಂದೂ ಸಮಾಜದ ಒಗ್ಗಟ್ಟಿನ ಪ್ರದರ್ಶನ. ಪಾಕಿಸ್ತಾನವು ನೇರವಾಗಿ ಯುದ್ಧ ಮಾಡಲು ಧೈರ್ಯವಿಲ್ಲದೆ ಇಂತಹ ಹೇಯ ಕೃತ್ಯಗಳನ್ನು ನಡೆಸುತ್ತಿದೆ. ಭಯೋತ್ಪಾದನೆಯಿಂದ ಕಾಶ್ಮೀರವನ್ನು ತನ್ನ ವಶಗೆ ತೆಗೆದುಕೊಳ್ಳಲು ಹುನ್ನಾರ ನಡೆಸುತ್ತಿದೆ. ಇದು ಎಂದಿಗೂ ಸಾಧ್ಯವಿಲ್ಲ.ಕೇಂದ್ರ ಸರ್ಕಾರವು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕು. ಕಾಶ್ಮೀರ ಕಣವೆಗಳಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆಗಳನ್ನು ನಿರ್ಮೂಲನೆ ಮಾಡಬೇಕು ಎಂದರು.
ಚಂದ್ರಕಾಂತ ಅಕ್ಕಿ, ವೀರಣ್ಣ ಮಜ್ಜಗಿ, ಸಂತೋಷ ಕುರಿ, ನಾಗರಾಜ ಲಕ್ಕುಂಡಿ, ವಿಠಲ ಬಿಡವೆ, ಮಂಜುನಾಥ ಘಂಟಿ, ಫಕೀರೇಶ ರಟ್ಟಿಹಳ್ಳಿ, ದೀಪು ಕಪ್ಪತ್ತನವರ, ನಟರಾಜ ರಾನಡೆ, ರಾಮಣ್ಣ ಕಂಬಳಿ, ಪರಶುರಾಮ ಡೊಂಕಬಳ್ಳಿ, ಮಾಂತೇಶ ದಶಮನಿ, ಬಸವರಾಜ ತುಳಿ, ಯಲ್ಲಪ್ಪ ಇಂಗಳಗಿ, ಸುರೇಶ ಅಕ್ಕಿ, ಬಸವರಾಜ ವಡವಿ, ಶ್ರೀನಿವಾಸ ಕಪಟಕರ, ಶಶಿ ಪೂಜಾರ ಇದ್ದರು. ಪಿ.ಎಸ್.ಐ ಚೆನ್ನಯ್ಯ ದೇವೂರ ಹಾಗೂ ಸಿಬ್ಬಂದಿ ಬಂದೋಬಸ್ತ್ ಒದಗಿಸಿದರು.