
ಶಿವಮೊಗ್ಗ: ಕಾಶ್ಮೀರದ ಪಹಲ್ಗಮ್ ಲ್ಲಿ ನಡೆದ ಅಮಾಯಕ ಪ್ರವಾಸಿಗರ ಹತ್ಯೆ ಖಂಡಿಸಿ ತಾಲ್ಲೂಕು ಕಚೇರಿ ಮುಂಭಾಗ ನಗರದ ವಿವಿಧ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

j3tvkannada
ದೇಶದ ಒಳಗಿದ್ದುಕೊಂಡು ಉಗ್ರರಿಗೆ ಸಹಾಯ ಮಾಡುವವರನ್ನು ಹುಡುಕಿ ಶಿಕ್ಷೆ ವಿಧಿಸಬೇಕು. ಇನ್ನುಮುಂದೆ ಉಗ್ರರಿಗೆ ಯಾರೂ ಸಹಾಯ ಮಾಡಲು ಹೆದರುವಂತಹ ಪರಿಸ್ಥಿತಿ ನಿರ್ಮಾಣ ಮಾಡಬೇಕು. ಗಡಿಯಲ್ಲಿ ಸೇನಾ ಭದ್ರತೆಯನ್ನು ಹೆಚ್ಚಿಸುವ ಮೂಲಕ ಉಗ್ರರು ದೇಶದ ಒಳಗೆ ನುಸುಳುವುದನ್ನು ತಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು.
ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರಾದ ರೂಪಾ ರಾವ್, ಆರ್.ಎಸ್. ಶೋಭಾ, ಯಶೋಧ, ನಾಗರತ್ನ, ಶೋಭಾ, ಶಾರದಾ, ಮಲ್ಲಿಕಾಂಬ, ವಾಣಿಶ್ರೀ, ಸ್ವಪ್ನ ಮಾತನಾಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ವೀರಶೈವ ಲಿಂಗಾಯತ ಮಹಿಳಾ ಸಮಾಜ, ಕದಳಿ ವೇದಿಕೆ, ಶಾಶ್ವತಿ ಮಹಿಳಾ ಸಮಾಜ, ಮಹಿಳಾ ಸೇವಾ ಸಮಾಜ ಮತ್ತು ಕಸ್ತೂರಬಾ ವುಮೆನ್ಸ್ ಅಸೋಸಿಯೇಷನ್ ಪದಾಧಿಕಾರಿಗಳು, ಸದಸ್ಯರು, ನಿರ್ಮಲ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ರಂಗಪ್ಪ ವೃತ್ತದಲ್ಲಿ ರಸ್ತೆ ತಡೆ, ಮಾನವ ಸರಪಳಿ ನಿರ್ಮಿಸಿ, ನಂತರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.