
ವಿಜಯನಗರ: ಲೌಕಿಕ, ಪಾರಮಾರ್ಥಿಕ ಸಂಗತಿಗಳನ್ನು ಸಮನ್ವಯಿಸಿ ವಚನ ರಚಿಸಿರುವ ಬಸವಣ್ಣ ಸಮಷ್ಟಿ ಪ್ರಜ್ಞೆಯ ಕವಿ ಎಂದು ನಿವೃತ್ತ ಪ್ರಾಚಾರ್ಯ ಶಾಂತಮೂರ್ತಿ ಬಿ. ಕುಲಕರ್ಣಿ ಹೇಳಿದರು.

j3tvkannada
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಬುಧವಾರ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತಿಯಲ್ಲಿ ಅವರು ಉಪನ್ಯಾಸ ನೀಡಿದರು. ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಾದ ಸಿದ್ದಲಿಂಗಮ್ಮ, ಕವಿತಾ, ವಾಣಿ ಅವರನ್ನು ಸನ್ಮಾನಿಸಲಾಯಿತು.
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಎಂ. ಬಸಲಿಂಗಸ್ವಾಮಿ ಮಾತನಾಡಿದರು. ಗವಿಮಠದ ಹಿರಿಶಾಂತವೀರ ಸ್ವಾಮೀಜಿ, ಮಲ್ಲನಕೆರೆ ಮಠದ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ತಹಶೀಲ್ದಾರ್ ಜಿ. ಸಂತೋಷಕುಮಾರ್, ತಾಲ್ಲೂಕು ಪಂಚಾಯಿತಿ ಇ.ಒ ಎಂ.ಉಮೇಶ, ಬಿ.ಸಿ.ಎಂ ವಿಸ್ತರಣಾಧಿಕಾರಿ ಎಂ.ಪಿ.ಎಂ. ಅಶೋಕ, ವೀರಶೈವ ಮಹಾಸಭಾ ನಗರ ಘಟಕದ ಅಧ್ಯಕ್ಷ ಎಂ.ಉಮೇಶ್ ಇದ್ದರು. ಬಸವೇಶ್ವರರ ಚಿತ್ರದೊಂದಿಗೆ ಎತ್ತುಗಳ ಮೆರವಣಿಗೆ ಜರುಗಿತು.