
ರಾಯಚೂರು: ಕರ್ನಾಟಕ ಸೇನೆ ವತಿಯಿಂದ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಅವರು ಕಾರ್ಮಿಕರು ಹಾಗೂ ರೈತರು ದೇಶದ ಬೆನ್ನೆಲುಬು ಎಂದು ಹೇಳಿ ಕಾರ್ಮಿಕರಿಗೆ ಟೊಪ್ಪಿ ವಿತರಿಸಿದರು.

j3tvkannada
ನಗರದಲ್ಲಿ ಗುರುವಾರ ನಮ್ಮ ಕರ್ನಾಟಕ ಸೇನೆ ವತಿಯಿಂದ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು. ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೊಂಡಪ್ಪ ಮಾತನಾಡಿ, ಕಾರ್ಮಿಕರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆಯಬೇಕು ಎಂದು ಹೇಳಿದರು. ನಾಗರಾಜ್, ಮಹೇಶ ಪಟೇಲ್, ಆಟೋ ಚಾಲಕರ ಸಂಘದ ಉಪಾಧ್ಯಕ್ಷ ರಘುನಾಥ್, ನಾಗೇಶ್ ಜೆ ಮತ್ತು ವೀರೇಶ ಉಪಸ್ಥಿತರಿದ್ದರು.