
ಚಾಮರಾಜನಗರ: ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಇ ಮೇಲ್ ಸಂದೇಶ ಬಂದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ.

j3tvkannada
ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಇಮೇಲ್ಗೆ ಬೆದರಿಕೆ ಸಂದೇಶ ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಆತಂಕಕ್ಕೆ ಒಳಗಾಗಿ ಕಚೇರಿ ಬಿಟ್ಟು ಹೊರ ನಡೆದರು. ಕೇಂದ್ರದ ಮಾಜಿ ಸಚಿವೆ ಎಸ್ಪಿ ಬಿ.ಟಿ.ಕವಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಸೆನ್ ಠಾಣೆ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಿಡಿಗೇಡಿಯ ಐ.ಪಿ ವಿಳಾಸ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದರು. ಅಧಿಕಾರಿಗಳ ಹಾಗೂ ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ನೌಕರರನ್ನು ಕಚೇರಿಯಿಂದ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಬಾಂಬ್ ಶೋಧ ಕಾರ್ಯದಲ್ಲಿ ತೊಡಗಿದೆ. ಜಿಲ್ಲಾಡಳಿತ ಭವನದ ಮೂಲೆ ಮೂಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.