
ಬೆಂಗಳೂರು ಗ್ರಾಮಾಂತರ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಎಂದೂ ನಾನು ರಾಜಕೀಯ ಮಾಡವುದಿಲ್ಲ. ಮುಖ್ಯವಾಗಿ ಕ್ಷೇತ್ರಕ್ಕೆ ಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಪಕ್ಷಾತೀತವಾಗಿ ಮಾಡುತ್ತಿದ್ದು, ಅರ್ಹರಿಗೆ ಸವಲತ್ತು ನೀಡಲಾಗುತ್ತಿದೆ. ಆ ಮೂಲಕವಾಗಿ ಕ್ಷೇತ್ರದ ಅಭಿವೃದ್ಧಿಯಷ್ಟೇ ನಮ್ಮ ಧ್ಯೇಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

j3tvkannada
ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ, ಭೋದನಹೊಸಳ್ಳಿ, ಮುತ್ತೂರು ಹಾಗೂ ಹೆಮ್ಮಂಡಹಳ್ಳಿ ಗ್ರಾಮಗಳಲ್ಲಿ ಸುಮಾರು 10 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ನಂತರ ಮಾತನಾಡಿದರು.
ಮುಖ್ಯಮಂತ್ರಿ ವಿಶೇಷ ಹಾಗೂ ಎಸ್.ಸಿ.ಪಿ ಟಿ.ಎಸ್.ಪಿ ಅನುದಾನದಲ್ಲಿ ಸಮೇತನಹಳ್ಳಿ ಗ್ರಾಮದಲ್ಲಿ 80 ಲಕ್ಷ ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ವೆಂಗಯ್ಯನ ಕೆರೆ ಏತ ನೀರಾವರಿ ಯೋಜನೆಯಡಿ ಸಮೇತನಹಳ್ಳಿಯ ಅಂಗಕ್ಕನ ಕೆರೆಗೆ ಸುಮಾರು 43 ಎಂ.ಎಲ್.ಡಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.
ಭೋದನಹೊಸಳ್ಳಿ ಗ್ರಾಮದ ಕೆರೆಗೆ ಯೂನೈಟೆಡ್ ವೇ ಸಂಸ್ಥೆ ಸಹಯೋಗದಲ್ಲಿ ಅಂಗಕ್ಕನ ಕೆರೆ ಅಭಿವೃದ್ಧಿಗೆ 1.9 ಕೋಟಿ ವೆಚ್ಚದಲ್ಲಿ ಅಭಿವೃದಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ಟಿ.ಎ.ಪಿ.ಸಿ.ಎಂ.ಎಸ್ ಮಾಜಿ ಅಧ್ಯಕ್ಷ ಕೋಡಿಹಳ್ಳಿ ಸೊಣ್ಣಪ್ಪ, ಸಮೇತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜ್, ಅನುಗೊಂಡನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಶ್ ಸೇರಿದಂತೆ ಹಲವು ಮುಖಂಡರು, ಸಾರ್ವಜನಿಕರು ಹಾಜರಿದ್ದರು.